ಯಶ್​​ಗೆ ಶಿವಣ್ಣ ಬಗ್ಗೆ ಇರೋ ಕೇರ್​ ನೋಡಿ; ಕಣ್ಣಲ್ಲೆ ಸನ್ನೆ ಕೊಟ್ಟ ರಾಕಿ – Kannada News | Yash Wins Hearts With His Respect And Care For Shivarajkumar At Toxic Event

ರಾಕಿಂಗ್ ಸ್ಟಾರ್ ಯಶ್ ಅವರು ತುಂಬಾನೇ ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಅವರು ಈಗ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ‘ಟಾಕ್ಸಿಕ್’ (Toxic Movie) ಹಾಗೂ ರಾಮಾಯಣದಂತಹ ಬಿಗ್ ಬಜೆಟ್ ಸಿನಿಮಾ ಅವರ ಕೈಯಲ್ಲಿ ಇದೆ. ಇಷ್ಟೆಲ್ಲ ಎತ್ತರಕ್ಕೆ ಬೆಳೆದರೂ ಅವರಿಗೆ ತಮಗಿಂತಲೂ ಹಿರಿಯ ನಟರ ಮೇಲೆ ಇರುವ ಗೌರವ ಹಾಗೂ ಪ್ರೀತಿ ಸ್ವಲ್ಪವೂ ಕಡಿಮೆ ಆಗಿಲ್ಲ. ಇದಕ್ಕೆ ಇತ್ತೀಚೆಗೆ ರಿಲೀಸ್ ಆದ ‘ಟಾಕ್ಸಿಕ್’ ಈವೆಂಟ್​​​ನಲ್ಲಿ ನಡೆದ ಘಟನೆಯೇ ಉತ್ತಮ ಸಾಕ್ಷಿ.

‘ಟಾಕ್ಸಿಕ್’ ಸಿನಿಮಾದ ಈವೆಂಟ್ ಬೆಂಗಳೂರಿನ ಎಎಂಬಿ ಸಿನಿಮಾಸ್​​ನಲ್ಲಿ ನಡೆದಿದೆ. ಈ ಈವೆಂಟ್​​ಗೆ ಇಡೀ ಟಾಕ್ಸಿಕ್ ತಂಡ ಹಾಜರಿತ್ತು. ಕಿಯಾರಾ ಅಡ್ವಾಣಿ, ನಯನತಾರಾ ಸೇರಿದಂತೆ ಅನೇಕರು ವೇದಿಕೆ ಮೇಲೆ ಇದ್ದರು. ಶಿವರಾಜ್​ಕುಮಾರ್ ಅವರು ಟಾಕ್ಸಿಕ್ ಟ್ರೇಲರ್ ಲಾಂಚ್​​ಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ವೇದಿಕೆ ಮೇಲೆ ಬಂದು ಇಡೀ ತಂಡಕ್ಕೆ ಹರಸಿದರು.

‘ಟಾಕ್ಸಿಕ್’ ಟ್ರೇಲರ್ ಲಾಂಚ್ ಮಾಡಿದ ಬಳಿಕ ಶಿವರಾಜ್​ಕುಮಾರ್ ಬೇರೆ ಅನಿವಾರ್ಯ ಕಾರಣದಿಂದ ಕಾರ್ಯಕ್ರಮದಿಂದ ಅರ್ಧಕ್ಕೆ ಹೊರಟು ನಿಂತರು. ಆಗ ಶಿವಣ್ಣ ಅವರು ತಮ್ಮ ಬಾಡಿಗಾರ್ಡ್​ಗೆ ಕಣ್ಣಲ್ಲೇ ಸನ್ನೆ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ.

‘ಶಿವಣ್ಣ ಹೊರಟಿದ್ದಾರೆ. ಅವರನ್ನು ಕಾರಿನವರೆಗೆ ಬಿಟ್ಟು ಬನ್ನಿ’ ಎಂದು ರಾಕಿ ಭಾಯ್ ತಮ್ಮ ಬಾಡಿಗಾರ್ಡ್​​ಗೆ ಹೇಳಿದರು. ತಕ್ಷಣ ಬಾಡಿಗಾರ್ಡ್ ಶಿವರಾಜ್‌ಕುಮಾರ್ ಅವರಿಗೆ ಬೆಂಗಾವಲಾಗಿ ಕಾರಿನವರೆಗೆ ಬಿಟ್ಟು ಬಂದಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಯಶ್ ಅವರ ಈ ಕಾಳಜಿಯನ್ನು ಎಲ್ಲರೂ ಕೊಂಡಾಡಿದ್ದಾರೆ.

ಇದನ್ನೂ ಓದಿ: ವೈರಲ್ ಆಗುತ್ತಿದೆ ಯಶ್ ಬೆತ್ತಲೇ ಸೀನ್​​, ರಣ್​​ಬೀರ್ ಕಪೂರ್ ಜೊತೆ ಹೋಲಿಕೆ ಏಕೆ?

ಶಿವಣ್ಣನಿಗೆ ಅವರದ್ದೇ ಆದ ಬಾಡಿಗಾರ್ಡ್ ಇರುತ್ತಾರೆ. ಅವರು ಕಾರ್ಯಕ್ರಮದಿಂದ ಹೊರಟು ನಿಂತಾಗ ಯಶ್ ಆ ಬಗ್ಗೆ ತಲೆಕೆಡಿಸಿಕೊಳ್ಳದೆಯೂ ಇರಬಹುದಿತ್ತು. ಆದರೆ, ಅವರು ಹಾಗೆ ಮಾಡಿಲ್ಲ. ಶಿವರಾಜ್​​ಕುಮಾರ್ ಬಗ್ಗೆ ನಿಜವಾದ ಕಾಳಜಿ ತೋರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:40 am, Mon, 10 August 26

Source link

Leave a Reply

Your email address will not be published. Required fields are marked *