ಯುಗಾದಿಗೆ ಮೈಸೂರು, ಧರ್ಮಸ್ಥಳ, ಕುಕ್ಕೆಗೆ ಹೋಗುವವರಿಗೆ ಬಿಗ್​​ ಶಾಕ್​​​​​ ನೀಡಿದ ಖಾಸಗಿ ಬಸ್​​​: ಟಿಕೆಟ್​​​​ ದರ ಏರಿಕೆ ಪಟ್ಟಿ ಇಲ್ಲಿದೆ

ಯುಗಾದಿಗೆ ಮೈಸೂರು, ಧರ್ಮಸ್ಥಳ, ಕುಕ್ಕೆಗೆ ಹೋಗುವವರಿಗೆ ಬಿಗ್​​ ಶಾಕ್​​​​​ ನೀಡಿದ ಖಾಸಗಿ ಬಸ್​​​: ಟಿಕೆಟ್​​​​ ದರ ಏರಿಕೆ ಪಟ್ಟಿ ಇಲ್ಲಿದೆ

ಬೆಂಗಳೂರು, ಮಾ.17: ಸತತ ನಾಲ್ಕು ದಿನಗಳ ರಜೆ ಮತ್ತು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮೂರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ (Bengaluru private bus ) ಮಾಲೀಕರು ದರ ಏರಿಕೆಯ ಬಿಸಿ ಮುಟ್ಟಿಸಿದ್ದಾರೆ. ಯುಗಾದಿ ಮತ್ತು ರಂಜಾನ್ ಹಬ್ಬವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಿವೆ.

ಖಾಸಗಿ ಬಸ್ ದರ ಏರಿಕೆಯ ಕಟು ಸತ್ಯ (ನಾರ್ಮಲ್ vs ಹಬ್ಬದ ದರ):

ಬೆಂಗಳೂರು-ಮಂಗಳೂರು: 600 ರೂ. ಇದ್ದ ದರ ಈಗ 2,999 ರೂ. ವರೆಗೆ ಏರಿಕೆಯಾಗಿದೆ.

ಬೆಂಗಳೂರು-ಧಾರವಾಡ/ಹುಬ್ಬಳ್ಳಿ: 400-1,300 ರೂ. ಇದ್ದ ದರ ಭರ್ಜರಿ 4,500 ರೂ. ತಲುಪಿದೆ.

ಬೆಂಗಳೂರು-ಶಿವಮೊಗ್ಗ: 400 ರೂ. ಇದ್ದ ಸಾಮಾನ್ಯ ದರ ಹಬ್ಬದ ವೇಳೆ 2,799 ರೂ.ಕ್ಕೆ ಜಿಗಿದಿದೆ.

ಬೆಂಗಳೂರು-ಧರ್ಮಸ್ಥಳ: 500 ರೂ. ರಿಂದ 3,600 ರೂ.ಕ್ಕೆ ಏರಿಕೆ ಕಂಡುಬಂದಿದೆ.

ಬೆಂಗಳೂರು-ಮೈಸೂರು: ಕೇವಲ 350 ರೂ. ಇದ್ದ ದರ ಈಗ 2,500 ರೂ. ವರೆಗೆ ವಸೂಲಿ ಮಾಡಲಾಗುತ್ತಿದೆ.

ಆದರೆ ಇದರ ನಡುವೆ ಖಾಸಗಿ ಬಸ್‌ಗಳ ದರ ಏರಿಕೆಯಿಂದ ಕಂಗಾಲಾದ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೆರವಾಗಲಿದೆ.ಮಾರ್ಚ್ 18, 19 ಮತ್ತು 20 ರಂದು ಬೆಂಗಳೂರಿನ ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್), ಮೈಸೂರು ರಸ್ತೆ ಸ್ಯಾಟಲೈಟ್ ಮತ್ತು ಶಾಂತಿನಗರ ನಿಲ್ದಾಣಗಳಿಂದ ರಾಜ್ಯದ ವಿವಿಧ ಮೂಲೆಗಳಿಗೆ 2,000 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ: ರೊಚ್ಚಿಗೆದ್ದ ಕನ್ನಡಪರ ಹೋರಾಟಗಾರರು

“ಡೀಸೆಲ್ ದರ ಏರಿಕೆ ಮತ್ತು ಸರ್ಕಾರದ ತೆರಿಗೆ ಹೊರೆಯಿಂದಾಗಿ ಅನಿವಾರ್ಯವಾಗಿ ದರ ಹೆಚ್ಚಿಸಬೇಕಾಗಿದೆ. ಯುದ್ಧದಂತಹ ಪರಿಸ್ಥಿತಿಯಿಂದ ಡೀಸೆಲ್ ಬೆಲೆಯಲ್ಲಿ ಏರಿಳಿತವಾಗುತ್ತಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ದರ ಏರಿಕೆ ಅಷ್ಟೊಂದು ಹೆಚ್ಚಿಲ್ಲ” ಎಂದು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ. ಇನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆಯ ( ಸ್ಯಾಟ್ ಲೈಟ್ )ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಿಂದ ಸಂಚಾರ ಮಾಡಲಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *