ಚಾವುಂಡಿ ದೈವಕ್ಕೆ ರಣವೀರ್ ಸಿಂಗ್ ಅವಮಾನ ಮಾಡಿದ ಪ್ರಕರಣ ಕೊನೆಗೂ ಇತ್ಯರ್ಥವಾಗಿದೆ. ಈ ಪ್ರಕರಣದಲ್ಲಿ ರಣವೀರ್ ಕ್ಷಮೆಯಾಚನೆಯನ್ನು ವಕೀಲರು ಒಪ್ಪಿಕೊಂಡಿದ್ದಾರೆ. ಅವರು ಶೀಘ್ರದಲ್ಲೇ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಎಲ್ಲಾ ತಪ್ಪಿಗೂ ಕ್ಷಮೆ ಇದೆ ಎಂದು ವಕೀಲರು ಅಭಿಪ್ರಾಯಪಟ್ಟಿದ್ದಾರೆ. ದೇವಸ್ಥಾನ ಭೇಟಿಗೆ ಭದ್ರತೆಯ ಸಮಸ್ಯೆ ಆಗಬಹುದು ಎಂದು ರಣವೀರ್ ಸಿಂಗ್ ಹೇಳಿದ್ದರಂತೆ. ಆದರೆ, ಕರ್ನಾಟಕ ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ ಎಂಬ ಭರವಸೆ ನೀಡಿರುವುದಾಗಿ ವಕೀಲರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
