ರಾಜಕೀಯ ಹೈವೋಲ್ಟೇಜ್ ಕೇಂದ್ರವಾದ ಡಿಕೆ ಶಿವಕುಮಾರ್ ನಿವಾಸ

ಬೆಂಗಳೂರು, ಮೇ 28: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ತಡರಾತ್ರಿ 1 ಗಂಟೆಯವರೆಗೂ ಆಪ್ತರೊಂದಿಗೆ ಚರ್ಚೆ ನಡೆಸಿದ ಡಿಕೆ ಶಿವಕುಮಾರ್, ಪ್ರಸ್ತುತ ವಿಶ್ರಾಂತಿ ಮುಗಿಸಿ ಸಿದ್ದರಾಮಯ್ಯ ಆಯೋಜಿಸಿರುವ ಉಪಾಹಾರ ಕೂಟಕ್ಕೆ ತೆರಳುತ್ತಿದ್ದಾರೆ. ಡಿಕೆ ಶಿವಕುಮಾರ್ ನಿವಾಸದ ಬಳಿ ಆಪ್ತರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಸುಮಾರು 50ಕ್ಕೂ ಹೆಚ್ಚು ಪೊಲೀಸರು, ಶೇಷಾದ್ರಿಪುರಂ ಠಾಣೆಯ ಎಸಿಪಿ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ. ನಿವಾಸಕ್ಕೆ ಸಂಪರ್ಕಿಸುವ ಎರಡು ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 9 ಗಂಟೆಗೆ ಆಯೋಜಿಸಿರುವ ಉಪಹಾರ ಕೂಟದಲ್ಲಿ ಮುಖ್ಯಮಂತ್ರಿ ನಿರ್ಧಾರ ಪ್ರಕಟವಾಗುವ ನಿರೀಕ್ಷೆಯಿದೆ. ಕಳೆದ ದಿನ ಮುಖ್ಯಮಂತ್ರಿ ನಿವಾಸದ ಬಳಿ ಇದ್ದ ಜನರ ಚಿತ್ತ, ಇಂದು ಡಿಸಿಎಂ ನಿವಾಸದತ್ತ ಶಿಫ್ಟ್ ಆಗಿರುವುದು ರಾಜ್ಯ ರಾಜಕಾರಣದ ಕುತೂಹಲ ಹೆಚ್ಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *