ತುಮಕೂರು, (ಆಗಸ್ಟ್ 05): ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕರು ಬೇಸರಗೊಂಡಿದ್ದು, ಪಕ್ಷದ ನಡೆಗೆ ಆಕ್ರೋಶಗೊಂಡಿದ್ದಾರೆ. ಈ ಸಾಲಿನಲ್ಲಿ ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ಸಹ ಒಬ್ಬರಾಗಿದ್ದು, ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಎಸ್ಆರ್ಟಿಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಡಿಕೆ ಶಿವಕುಮಾರ್, ಶ್ರೀನಿವಾಸ್ ಅವರಿಗೆ ಕರೆ ಮಾಡಿ ಮನವೊಲಿಸಿದ್ದು, ಇದೀಗ ಶ್ರೀನಿವಾಸ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹೌದು…ಸಿಎಂ ಡಿಕೆ ಶಿವಕುಮಾರ್ ಕರೆ ಬಳಿಕ ಮಾತನಾಡಿದ ಶ್ರೀನಿವಾಸ್, ಕೆಎಸ್ಆರ್ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿದ್ದೆ. ಆದ್ರೆ, ಎಲ್ಲಾ ನಿಗಮ ಮಂಡಳಿಗಳನ್ನ ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಇನ್ನು ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಉಲ್ಟಾ ಹೊಡಿದಿದ್ದಾರೆ.