ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್​​​ಗೆ ಎಚ್ಚರಿಕೆ

ಬೆಂಗಳೂರು, ಮೇ 27: ಸದ್ಯ ರಾಜ್ಯ ರಾಜಕಾರಣದಲ್ಲಿ ಪಟ್ಟದಾಟ ಕ್ಲೈಮ್ಯಾಕ್ಸ್​​ಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇತ್ತ ಅಧಿಕೃತ ನಿವಾಸ ಕಾವೇರಿ ಎದುರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ‘ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಪಕ್ಷ ಉಳಿಯುವುದಿಲ್ಲ, ನಾವು ಅದಕ್ಕೆ ಬಿಡುವುದಿಲ್ಲ’ ಎಂದು ಅಭಿಮಾನಿಗಳು ಹೇಳಿದ್ದಾರೆ. ಇನ್ನು ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೆಲ ಕಾಂಗ್ರೆಸ್ ನಾಯಕರು, ಹೈಕಮಾಂಡ್‌ನಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ ಎಂದಿದ್ದಾರೆ. ಸುರ್ಜೇವಾಲಾ ಅವರು ಬೆಂಗಳೂರಿಗೆ ಬಂದ ನಂತರ ಪರಿಸ್ಥಿತಿಯ ಕುರಿತು ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಗೃಹಸಚಿವ ಜಿ ಪರಮೇಶ್ವರ ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಇತರ ನಾಯಕರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *