Headlines

ರಾಜ್​ಕುಮಾರ್ ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್ – Kannada News | Kannada actor Chetan Kumar Ahimsa says we have to follow law like Dr Rajkumar

ಡಾ. ರಾಜ್​ಕುಮಾರ್ (Dr Rajkumar) ಸಮಾಧಿ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಕುಮಾರ್ ಅಹಿಂಸಾ ಅವರು ನೀಡಿದ ಹೇಳಿಕೆಯಿಂದ ವಿವಾದ ಭುಗಿಲೆದ್ದಿದೆ. ಚೇತನ್ ವಿರುದ್ಧ ರಾಜ್​ಕುಮಾರ್ ಅಭಿಮಾನಿಗಳು ಗರಂ ಆಗಿದ್ದಾರೆ. ಆದರೆ ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ ಎಂದು ಚೇತನ್ (Chetan Kumar Ahimsa) ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ಕೂಡ ಚಿಕ್ಕ ವಯಸ್ಸಿನಿಂದ ಡಾ. ರಾಜ್​ಕುಮಾರ್ ಅವರ ಅಭಿಮಾನಿ. ಆದರೆ ಇಂದು ಅಭಿಮಾನಿ ಸಂಘದ ಪಟ್ಟಿ ಕಟ್ಟಿಕೊಂಡು ದಬ್ಬಾಳಿಕೆ ಮಾಡುತ್ತಿರುವವರನ್ನು ನಾವು ಸಹಿಸೋಕೆ ಆಗಲ್ಲ. ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ. ನಾವೆಲ್ಲರೂ ಕಾನೂನಿನ ಅಡಿಯಲ್ಲಿ ಇದ್ದೇವೆ. ರಾಜ್​ಕುಮಾರ್ ಕೂಡ 20ನೇ ಶತಮಾನದ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಕೂಡ ಅವರು ಕಾನೂನಿನ ಅಡಿಯಲ್ಲಿ ಬಹಳ ಸರಳವಾಗಿ ಬದುಕಿದ್ದಾರೆ. ಅವರ ರೀತಿಯೇ ನಾವು ಬದುಕಬೇಕು’ ಎಂದು ಚೇತನ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *