
ರಾಯಚೂರು, ಜನವರಿ 20: ಲಾರಿ ಮತ್ತು ಎರಡು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ನಡೆದಿದೆ. ಮೃತರು ಹಾಗೂ ಗಾಯಾಳುಗಳ ಗುರುತು ಪತ್ತೆಯಾಗಿಲ್ಲ. ಭೀಕರ ಅಪಘಾತದಲ್ಲಿ ಕೆಲ ಕುರಿಗಳು ಕೂಡ ಸಾವನ್ನಪ್ಪಿವೆ. ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.