ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ ಕೆಕೆಆರ್‌ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ – Kannada News | Raichur Bus Accident: KKRTC Bus Overturns Near Lingsugur After Steering Failure; 40 Passengers Escape Unhurt

ರಾಯಚೂರು, ಏಪ್ರಿಲ್ 23: ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸುಣಕಲ್ ಗ್ರಾಮದ ಬಳಿ ಚಲಿಸುತ್ತಿದ್ದ ಸಾರಿಗೆ ಬಸ್‌ನ ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ ಘಟನೆ ನಡೆದಿದೆ. ಬಸ್‌ನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯಪುರ ಜಿಲ್ಲೆಯ ನಾಲತವಾಡದಿಂದ ಲಿಂಗಸಗೂರಿಗೆ ಬರುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಸೇರಿದ ಬಸ್ ಸುಣಕಲ್ ಗ್ರಾಮದ ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದಾಗಿ ಏಕಾಏಕಿ ಸ್ಟೀರಿಂಗ್ ಕಟ್ ಆಗಿದೆ. ತಕ್ಷಣ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ.

ಸ್ಟೀರಿಂಗ್ ಕಟ್ ಆದ ಕ್ಷಣದಲ್ಲೇ ಚಾಲಕ ಬಸ್ಸನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದು, ಇದರಿಂದಾಗಿ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಬಸ್‌ನಲ್ಲಿದ್ದ 40 ಪ್ರಯಾಣಿಕರ ಪೈಕಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಲಿಂಗಸಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *