ರಾಹುಲ್ ಗಾಂಧಿಯೇ ದೇಶದ ಮುಂದಿನ ಪ್ರಧಾನಿಯಾಗಬೇಕು: ಸಿಎಂ ರೇವಂತ್ ರೆಡ್ಡಿ – Kannada News | CM Revanth Reddy: Rahul Gandhi Must Be PM in 2029 for India’s Progress

ಹೈದರಾಬಾದ್, ಜುಲೈ 05: ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ(Rahul Gandhi) ಅವರೇ ದೇಶದ ಮುಂದಿನ ಪ್ರಧಾನಿಯಾಗಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ದೇಶದ ಭವಿಷ್ಯದ ನಾಯಕನನ್ನಾಗಿ ಮಾಡಲು ತೆಲಂಗಾಣದ ಜನತೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತೆಲಂಗಾಣದ ಮಿಡ್ಜಿಲ್ ಮಂಡಲ್‌ನಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಪ್ರಮುಖವಾಗಿ ಈ ಕೆಳಗಿನ ವಿಷಯಗಳನ್ನು ಹಂಚಿಕೊಂಡಿದ್ದಾರೆ. ತೆಲಂಗಾಣಕ್ಕೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ. ಅದಕ್ಕಾಗಿ 2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಲು ರಾಜ್ಯದ ಜನತೆ ಕೈಜೋಡಿಸಬೇಕು ಎಂದರು.

ಈ ದೇಶದ ಪ್ರಗತಿಗಾಗಿ ರಾಹುಲ್ ಗಾಂಧಿ ಅವರು ಪ್ರಧಾನಿ ಹುದ್ದೆಗೇರುವುದು ಇಂದಿನ ಐತಿಹಾಸಿಕ ಅವಶ್ಯಕತೆಯಾಗಿದೆ. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು 2034 ರವರೆಗೆ ಅಧಿಕಾರದಲ್ಲಿ ಇರಲಿದೆ. ಮುಂದಿನ ದಿನಗಳಲ್ಲೂ ಪಕ್ಷ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳಲಿದೆ.

ಮತ್ತಷ್ಟು ಓದಿ: ‘ರಫೇಲ್ ಯುದ್ಧ ವಿಮಾನಗಳ ಬಗ್ಗೆ ಪಾಕಿಸ್ತಾನದ ಸುಳ್ಳು ಬಯಲು’; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

2023ರ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಆರ್‌ಎಸ್ (BRS) ಪಕ್ಷದ 10 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

ಜುಲೈ 4, 2006 ರಂದು ಇದೇ ಮಿಡ್ಜಿಲ್‌ನಿಂದ ಜಿಲ್ಲಾ ಪರಿಷತ್ (ZPTC) ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರೇವಂತ್ ರೆಡ್ಡಿ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು. ಅಂದು ನೀವು ನೆಟ್ಟ ಸಸಿ ಇಂದು ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಹೆಮ್ಮರವಾಗಿ ನಿಂತಿದೆ ಎಂದು ಭಾವನಾತ್ಮಕವಾಗಿ ಜನರಿಗೆ ಧನ್ಯವಾದ ತಿಳಿಸಿದರು.

ತೆಲಂಗಾಣಕ್ಕೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಿದ ಸೋನಿಯಾ ಗಾಂಧಿ ಅವರ ತ್ಯಾಗಕ್ಕೆ ಕೃತಜ್ಞತೆ ಸಲ್ಲಿಸಲು, ರಾಜ್ಯದ ಜನತೆ 2029 ರಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಲು ಬೆಂಬಲಿಸಬೇಕು ಎಂದು ಕರೆ ನೀಡಿದರು. ಹಿಂದಿನ ಬಿಆರ್‌ಎಸ್ ಸರ್ಕಾರ ಕೇವಲ ಜನರ ಫೋನ್‌ಗಳನ್ನು ಕದ್ದು ಕೇಳಲು ಮತ್ತೆ ಅಧಿಕಾರಕ್ಕೆ ಬರಬೇಕೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೇವಂತ್ ರೆಡ್ಡಿ ಅವರು 20 ವರ್ಷಗಳ ಹಿಂದೆ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ಇಂದು ಮುಖ್ಯಮಂತ್ರಿಯಾಗಿ ಅದೇ ಮಣ್ಣಿಗೆ ಮರಳಿರುವುದು ಈ ಸಭೆಗೆ ರಾಜಕೀಯ ಹಾಗೂ ಭಾವನಾತ್ಮಕ ಮಹತ್ವ ತಂದುಕೊಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *