ಗದಗ, ಜನವರಿ 12: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನ ಪತ್ತೆಯಾದ ಪ್ರಕರಣದಲ್ಲಿ ಹಲವು ಗೊಂದಲಗಳು ಉಂಟಾಗಿವೆ. ಮನೆ ನಿರ್ಮಾಣದ ಅಡಿಪಾಯದ ಕೆಲಸದ ವೇಳೆ ಸುಮಾರು 1 ಕೆ.ಜಿ. ಚಿನ್ನ ಪತ್ತೆಯಾದ ಬಳಿಕ, ಪುರಾತತ್ವ ಇಲಾಖೆಯ ಅಧಿಕಾರಿಗಳು ಇದು ನಿಧಿ ಅಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಇದು ನಿಧಿ ಅಲ್ಲದಿದ್ದರೆ ನಮ್ಮ ಬಂಗಾರ ನಮಗೆ ವಾಪಸ್ ಕೊಡಿ ಎಂದು ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈ ವಿಷಯ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರೂ ಜಿಲ್ಲಾಡಳಿತ, ವಿಶೇಷವಾಗಿ ಗದಗ ಜಿಲ್ಲಾಧಿಕಾರಿಗಳು ಈವರೆಗೂ ಗ್ರಾಮಕ್ಕೆ ಭೇಟಿ ನೀಡಿಲ್ಲ ಅಥವಾ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಇದು ನಿಧಿಯೋ ಅಥವಾ ಪೂರ್ವಜರ ಆಸ್ತಿಯೋ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
