ವಯಸ್ಸಾಗಿದೆ ಅಂತಾ ಮನೇಲಿ ಕೂರಲ್ಲ ಎಂದ ದೇವೇಗೌಡ್ರು! ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿಡಿ? – Kannada News | HD Deve Gowda Rajya Sabha Re election: JDS BJP Alliance Strategy in Karnataka

ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ದೇವೇಗೌಡ್ರು?

ಬೆಂಗಳೂರು, ಮೇ 23: ಜೂನ್ 25ಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (H. D. Deve Gowda) ರಾಜ್ಯಸಭಾ ಸದಸ್ಯತ್ವದ ಅವಧಿ ಪೂರ್ಣಗೊಳ್ಳುತ್ತಿದ್ದು, ಅವರನ್ನು ಮತ್ತೊಂದು ಅವಧಿಗೆ ಮರು ಆಯ್ಕೆ ಮಾಡಲು ಜೆಡಿಎಸ್ ನಾಯಕರು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ದೆಹಲಿ ಮಟ್ಟದಲ್ಲಿ ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರೊಂದಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮುಖ್ಯಾಂಶಗಳು

  • ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸಲು ಜೆಡಿಎಸ್ ನಾಯಕರು ಕಸರತ್ತು ನಡೆಸಿದ್ದಾರೆ.
  • ರಾಜ್ಯಸಭೆ ಮರು ಆಯ್ಕೆಯ ಸಂಪೂರ್ಣ ಜವಾಬ್ದಾರಿಯನ್ನು ಪ್ರಧಾನಿ ಮೋದಿಗೆ ಬಿಡಲಾಗಿದೆ.
  • ಮೈತ್ರಿಕೂಟದ ಸಂಖ್ಯಾಬಲದ ಆಧಾರದ ಮೇಲೆ ಜೆಡಿಎಸ್ ಸುಲಭವಾಗಿ ಗೆಲ್ಲುವ ಅವಕಾಶ ಹೊಂದಿದೆ.

ಮೈತ್ರಿ ಅಭ್ಯರ್ಥಿಯಾಗಿ ಗೌಡ್ರ ಗೆಲುವು ಪಕ್ಕಾ!

ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಒಬ್ಬ ಅಭ್ಯರ್ಥಿ ಗೆಲ್ಲಲು ಕನಿಷ್ಠ 45 ರಿಂದ 46 ಮತಗಳ ಅಗತ್ಯವಿದೆ. ಪ್ರಸ್ತುತ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಹೊಂದಿದ್ದು, ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದು. ಇನ್ನುಳಿದಂತೆ ಬಿಜೆಪಿ (63) ಮತ್ತು ಜೆಡಿಎಸ್ (18) ಮೈತ್ರಿಕೂಟದ ಬಳಿ ಒಟ್ಟು 81 ಮತಗಳಿದ್ದು, ಮೈತ್ರಿ ಅಭ್ಯರ್ಥಿಯಾಗಿ ದೇವೇಗೌಡರನ್ನು ಕಣಕ್ಕಿಳಿಸಿದರೆ ಅವರ ಗೆಲುವು ನಿಶ್ಚಿತವಾಗಿದೆ. ಗೌಡರ ಹಿರಿತನ ಮತ್ತು ರಾಜಕೀಯ ಅನುಭವಕ್ಕೆ ಮನ್ನಣೆ ನೀಡಿ ಹೈಕಮಾಂಡ್ ಒಪ್ಪಿಗೆ ನೀಡುವ ವಿಶ್ವಾಸದಲ್ಲಿ ದಳಪತಿಗಳಿದ್ದಾರೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ, ನಾವು ಯಾವುದೇ ಷರತ್ತು ಅಥವಾ ಒತ್ತಡ ಹೇರಿಲ್ಲ, ಪ್ರಧಾನಿ ಮೋದಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದಿದ್ದಾರೆ.

ವಯಸ್ಸಾಗಿದೆ ಅಂತಾ ಮನೆಯಲ್ಲಿ ಕೂರಲ್ಲ ಎಂದ ಹೆಚ್​ಡಿಡಿ

ತಮ್ಮ ಮರು ಆಯ್ಕೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ದೇವೇಗೌಡರು, ನಾನು ಸಾಮಾನ್ಯ ರೈತ ಕುಟುಂಬದಿಂದ ಬಂದು ದೇಶದ ಪ್ರಧಾನಿ ಹುದ್ದೆಯವರೆಗೆ ನೋಡಿದ್ದೇನೆ. ರಾಜ್ಯಸಭೆಯ ಅವಧಿ ಮುಗಿಯುತ್ತಿದ್ದು, ಉಳಿದದ್ದು ಪ್ರಧಾನಿ ನರೇಂದ್ರ ಮೋದಿ ಅವರ ವಿವೇಚನೆಗೆ ಬಿಟ್ಟದ್ದು. ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಕೊನೆಯ ಉಸಿರಿರುವವರೆಗೂ ಜನಗಳ ಪರವಾಗಿ ಹೋರಾಟ ಮಾಡುತ್ತೇನೆ. ವಯಸ್ಸಾಗಿದೆ ಎಂದು ಮನೆಯಲ್ಲಿ ಕೂರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *