
ಚಿಕ್ಕಮಗಳೂರು, ಮೇ 20: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ನಡೆದಿವೆ. ಕಡೂರು, ಬೀರೂರು ಭಾಗದಲ್ಲಿ ಭಾರಿ ಮಳೆಗೆ ರಸ್ತೆಗಳು ಹಾಗೂ ರೈಲ್ವೆ ಅಂಡರ್ಪಾಸ್ ಜಲಾವೃತವಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಡೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ರಸ್ತೆ ಸಂಪೂರ್ಣ ಮುಳುಗಿದ್ದರೆ, ಬಸವೇಶ್ವರ ಸರ್ಕಲ್ ಕೆರೆಯಂತಾಗಿದೆ. ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173ರ ರೈಲ್ವೆ ಅಂಡರ್ಪಾಸ್ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.