ಬೆಂಗಳೂರು,(ಜೂನ್ 29): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ ವಿಜಯೇಂದ್ರ (BY Vijayendra) ಅವರನ್ನು ಕೆಳಗಿಳಿಸುವ ಬಗ್ಗೆ ದೆಹಲಿ ನಾಯಕರಿಗೆ ಒತ್ತಾಯ ಮಾಡಿರುವ ಆಡಿಯೋ (Audio) ಒಂದು ಕೇಸರಿ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉಚ್ಚಾಟಿಸುವ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದಗೌಡರು ಕೇಂದ್ರದ ಪ್ರಭಾವಿ ನಾಯಕರೊಬ್ಬರ ಜೊತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿದೆ. ಇದರೊಂದಿಗೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಹಾಗೂ ಆಂತರಿಕ ಭಿನ್ನಮತದ ಬೆಂಕಿ ಮತ್ತೆ ಹೊಗೆಯಾಡಲು ಆರಂಭಿಸಿದೆ. ಹಾಗಾದ್ರೆ, ಆಡಿಯೋನಲ್ಲೇನಿದೆ ಎನ್ನುವುದನ್ನು ಕೇಳಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
