ನಟ ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಆದರೆ ವಿಜಯ್ ಸಿಎಂ ಆದ ಬಳಿಕ ನಟ ರಜನೀಕಾಂತ್ ಅವರು ಡಿಎಂಕೆ ಮುಖಂಡ ಮಾಜಿ ಸಿಎಂ ಸ್ಟಾಲಿನ್ ಅವರ ಭೇಟಿಯಾಗಿ ಸಾಂತ್ವನ ಹೇಳಿದ್ದರು. ವಿಜಯ್ ಬಗ್ಗೆ ಪತ್ರಕರ್ತರು ಪ್ರಶ್ನೆ ಮಾಡಿದಾಗಲೂ ಪ್ರಶ್ನೆಗಳಿಗೆ ಉತ್ತರಿಸದೆ ಜಾರಿ ಕೊಂಡಿದ್ದರು. ವಿಜಯ್ ಬಗ್ಗೆ ಅವರ ವರ್ತನೆ ತುಸು ಅಸೂಯೆಯಿಂದ ಕೂಡಿರುವಂತೆ ತೋರಿತ್ತು. ಆದರೆ ಇದೀಗ ನಟ ರಜನೀಕಾಂತ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಜಯ್ ಬಗ್ಗೆ ತಮಗೆ ಯಾವುದೇ ಅಸೂಯೆ ಇಲ್ಲ ಎಂದಿದ್ದಾರೆ. ಮಾತ್ರವಲ್ಲದೆ ಇನ್ನೂ ಕೆಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ವಿವರಕ್ಕಾಗಿ ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
