ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ; 50 ಲಕ್ಷ ಅನಿವಾಸಿ ಭಾರತೀಯರ ನೆರವಿಗೆ ನಿಂತ ರಾಜ್ಯ ಸರ್ಕಾರ – Kannada News | CM D.K. Shivakumar Announces New NRI Department for Welfare and Investment Growth

ಬೆಂಗಳೂರು, ಜೂ.20: ರಾಜ್ಯದಲ್ಲಿ ಅನಿವಾಸಿ ಭಾರತೀಯ (ಎನ್‌ಆರ್‌ಐ) ಇಲಾಖೆ ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ 10ಕ್ಕೂ ಹೆಚ್ಚು ಅನಿವಾಸಿ ಭಾರತೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು, ಬಂಡವಾಳ ಕ್ರೂಢೀಕರಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ವ್ಯಾಪಾರ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ಈ ಇಲಾಖೆಯ ಪ್ರಮುಖ ಉದ್ದೇಶಗಳಾಗಿವೆ. ತಮಿಳುನಾಡು, ಕೇರಳ ಮತ್ತು ಪಂಜಾಬ್ ರಾಜ್ಯಗಳ ಮಾದರಿಯಲ್ಲಿ ಈ ಇಲಾಖೆಯನ್ನು ರೂಪಿಸಲಾಗುತ್ತಿದೆ. ವಿದೇಶದಲ್ಲಿ ಕಾನೂನು ಸಮಸ್ಯೆಗಳು, ಪಾಸ್‌ಪೋರ್ಟ್ ತೊಂದರೆಗಳು, ಮರಣದಂತಹ ಸಂದರ್ಭಗಳಲ್ಲಿ ನೆರವು ನೀಡಲು ಇಲಾಖೆ ಕಾರ್ಯನಿರ್ವಹಿಸಲಿದೆ. ಅನಿವಾಸಿ ಕನ್ನಡಿಗರ ದೂರುಗಳನ್ನು ಪರಿಹರಿಸಲು ಪ್ರತ್ಯೇಕ ವಿಚಾರಣಾ ಡೆಸ್ಕ್ ರಚಿಸುವ ಸಾಧ್ಯತೆಗಳೂ ಇವೆ. ಸುಮಾರು 50 ಲಕ್ಷ ಅನಿವಾಸಿ ಭಾರತೀಯರಿಗೆ ನೆರವು ನೀಡುವ ಗುರಿಯನ್ನು ಇಲಾಖೆ ಹೊಂದಿದೆ. ಈ ನಿರ್ಧಾರದಿಂದ ರಾಜ್ಯಕ್ಕೆ ವಿದೇಶಿ ವಿನಿಮಯ ಹೆಚ್ಚಳವಾಗುವ ನಿರೀಕ್ಷೆಯಿದೆ. ಅನಿವಾಸಿ ಕನ್ನಡಿಗರ ಬಹು ವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಇದು ಮುಖ್ಯಮಂತ್ರಿಗಳ ಆರನೇ ಗ್ಯಾರಂಟಿಗಳಲ್ಲಿ ಒಂದಾಗಿದೆ ಎಂದು ಅನಿವಾಸಿ ಭಾರತೀಯ ಸಂಘಟನೆಗಳು ಸಂತಸ ವ್ಯಕ್ತಪಡಿಸಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *