ಬೆಂಗಳೂರು, ಜೂನ್ 18: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐವರು ಅಭ್ಯರ್ಥಿಗಳು ಗೆದ್ದಿದ್ದು, ಪ್ರಥಮ ಸುತ್ತಿನ ಮತಗಳಲ್ಲೇ ಎಲ್ಲಾ ಅಭ್ಯರ್ಥಿಗಳು ವಿಜಯ ಕಂಡಿರುವ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಳ್ಳಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
