ಚಾಮರಾಜನಗರ, ಜುಲೈ 13: ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರು ಘೇರಾವ್ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೇವಲ SIR ಕುರಿತು ಮಾತನಾಡಲು ಚಾಮರಾಜನಗರಕ್ಕೆ ಬಂದಿದ್ದೀರಿ. ಆದ್ರೆ ಮಳೆ ಬಾರದ ಬಗ್ಗೆ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಿಲ್ಲ. ವಿಪಕ್ಷ ನಾಯಕರಾಗಿ ಸರ್ಕಾರಕ್ಕೆ ಕಣ್ಣು ತೆರೆಸುವ ಕೆಲಸ ಮಾಡ್ಬೇಕು. ಬಿಜೆಪಿ ಸಂಸದರು ಬರ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಅಶೋಕ್ ವಾಹನ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ವೇಳೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮನವಿಗೆ ವಿರೋಧ ಪಕ್ಷದ ನಾಯಕರು ಕೂಡ ಸ್ಪಂದಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
