ವಿವಾದದ ನಡುವೆಯೇ ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ – Kannada News | Bidadi Township: Farmers Supporting Project Apply for Land Compensation

ರಾಮನಗರ, ಜುಲೈ 17: ಬಿಡದಿ ಟೌನ್‌ಶಿಪ್​​ ವಿರೋಧಿಸಿ ರೈತರು ಮತ್ತು ವಿಪಕ್ಷಗಳ ಹೋರಾಟದ ನಡುವೆಯೇ ಯೋಜನೆಯ ಪರವಾಗಿರುವ ರೈತರು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಕಚೇರಿಯಲ್ಲಿ ಭೂ ಪರಿಹಾರಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಬನ್ನಿಗಿರಿ, ಹೊಸೂರು, ಅರಳಾಳುಸಂದ್ರ, ಕೆ.ಜಿ. ಗೊಲ್ಲರಪಾಳ್ಯ ಸೇರಿದಂತೆ ನಾಲ್ಕು ಗ್ರಾಮಗಳ ಭೂಸ್ವಾಧೀನಕ್ಕೆ ಆದೇಶಿಸಲಾಗಿದ್ದು, ಈ ರೈತರು ತಮ್ಮ ಭೂಮಿಯನ್ನು ನೀಡಲು ಸಿದ್ಧರಿದ್ದು, ಘೋಷಿತ ಪರಿಹಾರವನ್ನು ಪಡೆಯಲು ಮುಂದಾಗಿದ್ದಾರೆ. ಪ್ರಸ್ತುತ ಪ್ರತಿ ಎಕರೆಗೆ 2 ಕೋಟಿ ರೂ.ನಿಂದ 2.17 ಕೋಟಿ ರೂ.ವರೆಗೆ ಪರಿಹಾರ ನಿಗದಿಪಡಿಸಲಾಗಿದೆ. ರೈತರು ತಮ್ಮ ಜಮೀನಿನ ಮಾಲೀಕತ್ವದ ದಾಖಲೆಗಳು, ಆಧಾರ್ ಕಾರ್ಡ್, ಪಾಣಿ, ವಂಶವೃಕ್ಷ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸುತ್ತಿದ್ದಾರೆ. ಅಧಿಕಾರಿಗಳು ಕೂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *