ಇಂದು (ಮೇ 19) ದರ್ಶನ್ ಹಾಗೂ ವಿಜಯಲಕ್ಷ್ಮಿ (Vijayalakshmi Darshan) ಅವರ ವಿವಾಹ ವಾರ್ಷಿಕೋತ್ಸವ. ಆ ಪ್ರಯುಕ್ತ ಜೈಲಿನಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಮಾಡಿಕೊಡಲಾಗಿದೆ. ಮಗ ವಿನೀಶ್ ಜೊತೆ ಬಂದ ವಿಜಯಲಕ್ಷ್ಮಿ ಅವರು ದರ್ಶನ್ ಭೇಟಿ ಮಾಡಿ ವಾಪಸ್ ತೆರಳಿದ್ದಾರೆ. ಈ ಭೇಟಿಗಾಗಿ ದರ್ಶನ್ ಅವರು ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಜಾಮೀನು ಪಡೆಯಲು ಅವರು ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿತು. ಬಳಿಕ ದರ್ಶನ್ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
