ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ಸಮಾನವಾಗಿ ಹಂಚಿಕೆಗೆ ತೀರ್ಮಾನಿಸಿದೆ. ಅಂದರೆ ದಲಿತ ಎಡಗೈ 5, ಬಲಗೈ 5, ಇತರರಿಗೆ 5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇದರೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ.