ವೇತನ ಹಿಂಬಾಕಿಗೆ ಡಿಮ್ಯಾಂಡ್​​: ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ – Kannada News | Karnataka KSRTC Workers to Protest on Jan 29 Over 38 Months Salary Arrears

ಬೆಂಗಳೂರು, ಜನವರಿ 18: ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದು, ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಬೆಂಗಳೂರು ಚಲೋಗೆ ಕರೆನೀಡಿದ್ದಾರೆ. ಜನವರಿ 29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ ನಡೆಯಲಿದ್ದು, ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಂಟಿಕ್ರಿಯಾ ಸಮಿತಿ ಪತ್ರ ಬರೆದಿದೆ. 38 ತಿಂಗಳ ವೇತನ ಹಿಂಬಾಕಿ ನೀಡುವಂತೆ ಹಾಗೂ 01.01.2024ರಿಂದ 4 ವರ್ಷಗಳ ವೇತನಕ್ಕೆ ಬೇಡಿಕೆ ಇಡಲಾಗಿದ್ದು, ಪ್ರತಿಭಟನೆಯಲ್ಲಿ 4 ಸಾರಿಗೆ ನಿಗಮಗಳ ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.ನೌಕರರ ಈ ಪ್ರತಿಭಟನೆ ಎಚ್ಚರಿಕೆಗೆ ಸಾರಿಗೆ ಇಲಾಖೆ ಯಾವ ರೀತಿಯಾಗಿ ಸ್ಪಂದಿಸುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ. ಪ್ರತಿಭಟನೆಯ ಮುನ್ನವೇ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡುತ್ತದೆಯೇ ಎಂದು ಕಾದು ನೋಡಬೇಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *