ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, (ಆಗಸ್ಟ್ 09): ಸಚಿವ ಸಂಪುಟ ಪುನಾರಚನೆ ಬಳಿಕ ಕರ್ನಾಟಕ ಕಾಂಗ್ರೆಸ್​​​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಹೀಗಾಗಿ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಅಸಮಧಾನಿತರನ್ನು ಸಮಧಾನ ಮಾಡುವ ಯತ್ನ ನಡೆಸಿದ್ದಾರೆ. ಇದರ ಮಧ್ಯೆ ನೂತನ ಸಚಿವರಿಗೆ ಖಾತೆ ಹಂಚಿಕೆ ಸವಾಲು ಎದುರಾಗಿದ್ದು, ಈ ಸಂಬಂಧ ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 09) ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ನಿನ್ನೆ (ಆ.08) ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಅಲ್ಲದೇ ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಹಾಗೂ ಬಿಕೆ ಹರಿಪ್ರಸಾದ್ ಗೌಪ್ಯ ಮಾತು ಮಾಡಿದ್ದು ಸಂಚಲನ ಮೂಡಿಸಿದೆ. ಒಟ್ಟಿನಲ್ಲಿ ನಾಳೆ (ಆಗಸ್ಟ್ 10) ನೂತನ ಸಚಿವರಿಗೆ ಖಾತೆ ಹಂಚಿಕೆಯಾಗುವುದು ಬಹಿತೇಕ ಖಚಿತವಾಗಿದ್ದು, ಯಾರಿಗೆ ಯಾವ ಖಾತೆ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *