ದಾವಣಗೆರೆ, ಜೂನ್ 19: ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಕೇಸ್ಗೆ ಸಂಬಂಧಿಸಿದಂತೆ ನಿನ್ನೆ 11 ಜನರ ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ. ಜಯಪ್ಪ ಪತ್ನಿ ದೂರು ಆಧರಿಸಿ ಮಲೇಬೆನ್ನೂರು ಠಾಣೆಯಲ್ಲಿ ಮಾನಸಿಕ ಹಿಂಸೆ, ಕಿರುಕಳ ಹಾಗೂ ಜಾತಿನಿಂದನೆ ಆರೋಪದಡಿ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ, ರಂಜನಿ, ಚೇತನಾ, ಮಹಾಂತೇಶಗೌಳಿ ಮತ್ತು ಅಡುಗೆ ಸಹಾಯಕಿಯರಾದ ಸುಮಾ, ಚೆನ್ನಮ್ಮ, ವಿಜಯಮ್ಮ, ರೂಪಾ ಹಾಗೂ ಸಿಆರ್ಪಿ ಮತ್ತು ಬಿಆರ್ಪಿ ಸೇರಿ ಒಟ್ಟು 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅತ್ತ ದೂರು ದಾಖಲಾಗುತ್ತಿದ್ದಂತೆ ಇತ್ತ ಶಿಕ್ಷಕರು ಮತ್ತು ಅಡುಗೆ ಸಹಾಯಕಿಯವರು ತಲೆಮರೆಸಿಕೊಂಡಿದ್ದಾರೆ. ಇನ್ನು ಶಿಕ್ಷಕನ ಸಾವಿಗೆ ಕಾರಣರಾದ 5 ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.