Headlines

ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ: 7 ಆರೋಪಿಗಳ ಬಂಧನ, ಕ್ಷಮೆಯಾಚನೆ ವೀಡಿಯೋ ಹಂಚಿಕೊಂಡ ಪೊಲೀಸ್‌! – Kannada News | Shivajinagar Encroachment Drive: 7 Arrested for Assault, Apologize in Police Video

ಆರೋಪಿಗಳ ಕ್ಷಮೆಯಾಚನೆ ವೀಡಿಯೋ ವೈರಲ್

ಬೆಂಗಳೂರು, ಜುಲೈ 22: ಶಿವಾಜಿನಗರದಲ್ಲಿ ಗೇಟರ್ ಬೆಂಗಳೂರು ಪ್ರಾಧಿಕಾರ (GBA) ವತಿಯಿಂದ ಮಂಗಳವಾರ ನಡೆದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಜೆಸಿಬಿ ಬಳಸಿ ಅತಿಕ್ರಮಣ ತೆರವುಗೊಳಿಸಲು ಮುಂದಾದ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕ್ಷಮೆಯಾಚನೆಯ ವೀಡಿಯೋ ಹಂಚಿಕೊಂಡಿದ್ದಾರೆ.

ಪೆಪ್ಪರ್ ಸ್ಪ್ರೇ ಬಳಸಿ ಹಲ್ಲೆ ಯತ್ನ!

ಕಾರ್ಯಾಚರಣೆಗೆ ಅಡ್ಡಿಪಡಿಸಿದ ಪ್ರತಿಭಟನಾಕಾರರು ಪಾಲಿಕೆಯ ಇಂಜಿನಿಯರ್‌ಗಳು, ಜೆಸಿಬಿ ಚಾಲಕ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಒಬ್ಬ ಸಿಬ್ಬಂದಿಗೆ ಹೆಲ್ಮೆಟ್‌ನಿಂದ ಹೊಡೆಯಲು ಯತ್ನಿಸಿದ್ದು ಮಾತ್ರವಲ್ಲದೆ, ಚಾಲಕನ ಕಣ್ಣಿಗೆ ಪೆಪ್ಪರ್ ಸ್ಪ್ರೇ (Pepper Spray) ಸಿಂಪಡಿಸಿ ಉದ್ಧಟತನ ಮೆರೆದಿದ್ದಾರೆ. ಇದರಿಂದಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಸಚಿವ ಕೃಷ್ಣ ಭೈರೇಗೌಡ ಖಡಕ್ ಎಚ್ಚರಿಕೆ

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಇವರು ಜೀವನೋಪಾಯಕ್ಕೆ ಕಷ್ಟಪಡುವ ಬಡವರಲ್ಲ, ಸಮಾಜಘಾತುಕ ಶಕ್ತಿಗಳು. ಕರ್ತವ್ಯನಿರತ ಅಧಿಕಾರಿಗಳ ಮೇಲೆ ಕೈಮಾಡಿದ ಯಾರನ್ನೂ ಬಿಡುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಆರೋಪಿಗಳ ಕ್ಷಮೆಯಾಚನೆ ವೀಡಿಯೋ ವೈರಲ್

ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (AEE) ಮಾಧವ ರಾವ್ ನೀಡಿದ ದೂರಿನನ್ವಯ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, 7 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.

ಇದನ್ನೂ ಓದಿ ಶಿವಾಜಿನಗರ ಹಲ್ಲೆ ಪ್ರಕರಣ: ‘ನಾವು ಮಾಡಿದ್ದು ತಪ್ಪು’ ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!

ಇನ್ನೊಂದೆಡೆ, ಬೆಂಗಳೂರು ನಗರ ಪೊಲೀಸರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಬಂಧಿತ ಆರೋಪಿಗಳು “ನಾವು ಮಾಡಿದ್ದು ತಪ್ಪು, ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ” ಎಂದು ಕೈಮುಗಿದು ಸಾರ್ವಜನಿಕರಲ್ಲಿ ಕ್ಷಮೆಯಾಚಿಸುತ್ತಿರುವುದು ಕಂಡುಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *