
ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 06): ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ತಕರಾರು ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದ (Sringeri Assembly constituency) ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), 279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಆದೇಶ ಹೊರಡಿಸಿದೆ. ಹೀಗಾಗಿ ಫಲಿತಾಂಶ ಏನಾಗಲಿದೆ ಎನ್ನುವ ಕುತೂಹಲ ಕೆರಳಿಸಿದೆ.