
ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದೀಗ ಈ ಸಾವಿನ ಸುತ್ತು ಹಲವು ಅನುಮಾನಗಳನ್ನು ಮೂಡಿದೆ. ಇದು ಕೊಲೆಯೋ? ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿರುವುದಾ? ಎಂಬೆಲ್ಲ ಪ್ರಶ್ನೆಗಳು ಮೂಡಿದೆ. ಇನ್ನು ಬಾಲಕಿಯನ್ನು ಮೃತದೇಹವನ್ನು ಡ್ರೋನ್ ಮೂಲಕ ಪತ್ತೆ ಮಾಡಲಾಗಿದೆ. ದೇಹವೂ ಗಾಯಗಳಿಂದ ಕೂಡಿದೆ. ಬಾಲಕಿ ಏಪ್ರಿಲ್ 7ರಂದು ನಾಪತ್ತೆಯಾದಾಗ ಯಾವ ಬಟ್ಟೆಯನ್ನು ಧರಿಸಿದ್ದಳೋ, ಅದೇ ಬಟ್ಟೆಯಲ್ಲಿ ಮೃತದೇಹ ಪತ್ತೆಯಾಗಿದೆ. ಇದು ಬಾಲಕಿ ನಾಪತ್ತೆಯಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿರಬಹುದು ಎಂಬ ಶಂಕೆಯನ್ನು ಬಲಪಡಿಸಿದೆ. ಬಹಳ ಕಡಿದಾದ ಮತ್ತು ಮನುಷ್ಯರು ಸುಲಭವಾಗಿ ತಲುಪಲಾಗದ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವವಿದ್ದ ಕಾರಣ, ಡ್ರೋನ್ ಕ್ಯಾಮೆರಾಗಳು ಶವ ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಸದ್ಯಕ್ಕೆ ಶವವನ್ನು ಮೇಲೆತ್ತುವ ಕಾರ್ಯಾಚರಣೆ ಮುಂದುವರಿದಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಇದು ಕೊಲೆಯೋ ಅಥವಾ ಅಪಘಾತವೋ ಎಂಬ ಸತ್ಯ ಹೊರಬರಲಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ