ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್, ಕನ್ನಡತಿ ಶ್ರೇಯಾಂಕ ಪಾಟೀಲ್ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆಯೆಂದರೆ ಅವರಿಗೆ ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಮೇಲ್ನೋಟಕ್ಕೆ ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವಂತೆ ಕಾಣುತ್ತಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕ್ಯಾನ್ನಿಂಗ್ ವರದಿ ಬಂದ ಬಳಿಕವಷ್ಟೇ ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಖಚಿತವಾಗಿ ತಿಳಿಯಲಿದೆ.
ಟೀಂ ಇಂಡಿಯಾ ನೀಡಿದ 209 ರನ್ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡದ ಇನ್ನಿಂಗ್ಸ್ನ ಆರನೇ ಓವರ್ನ ಮೊದಲ ಎಸೆತದಲ್ಲಿ ಈ ದುರಂತ ಸಂಭವಿಸಿತು. ಈ ಪಂದ್ಯದಲ್ಲಿ ಮೊದಲ ಓವರ್ ಬೌಲ್ ಮಾಡಲು ಬಂದ ಶ್ರೇಯಾಂಕ ಪಾಟೀಲ್ ಎಸೆದ ಮೊದಲ ಎಸೆತವನ್ನು ಸ್ಟ್ರೈಕ್ನಲ್ಲಿದ್ದ ಮೊಲ್ಕೆನ್ಬೋರ್ ಮಿಡ್-ಆನ್ ಕಡೆಗೆ ಆಡಿದರು. ಹೀಗಾಗಿ ಶ್ರೇಯಾಂಕ ಬೌಲಿಂಗ್ ಮಾಡಿದ ಬಳಿಕ ಚೆಂಡನ್ನು ಹಿಡಿಯಲು ಅದರ ಹಿಂದೆ ಓಡಿದರು. ಚೆಂಡಿನ ಬಳಿ ಹೋದ ಶ್ರೇಯಾಂಕ ಅದನ್ನು ತೆಗೆದುಕೊಳ್ಳಲು ಕೆಳಕ್ಕೆ ಬಾಗಿದರು. ಈ ಪ್ರಕ್ರಿಯೆಯಲ್ಲಿ ಶ್ರೇಯಾಂಕ ಸಮತೋಲನ ಕಳೆದುಕೊಂಡರು. ಹೀಗಾಗಿ ಅವರ ಬಲಗಾಲು ತಿರುಚಿತು.
Published On – 10:06 pm, Wed, 17 June 26
