ಉಪ್ಪು- ಮೆಣಸು ಈ ಎರಡರಿಂದ ದೃಷ್ಟಿ ದೋಷ ನಿವಾರಣೆಗಾಗಿ ನಿವಾಳಿಸಿಕೊಳ್ಳಿ. ಮುಖ್ಯವಾಗಿ ಪದೇಪದೇ ಅಪಘಾತ, ಗಾಯಗಳು ಆಗುತ್ತಿದ್ದಲ್ಲಿ ಸಂಜೆ ವೇಳೆಗೆ ಇದನ್ನು ಮಾಡಿಕೊಳ್ಳುವುದರಿಂದ ದೃಷ್ಟಿದೋಷದ ನಿವಾರಣೆ ಆಗಿ, ಸಮಸ್ಯೆಯಿಂದ ಹೊರಗೆ ಬರುತ್ತೀರಿ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):
ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):
ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ ಸೂಚನೆ ದೊರೆಯಲಿದ್ದು, ಆ ಕಡೆಗೆ ಪೂರ್ಣ ಪ್ರಮಾಣದಲ್ಲಿ ಗಮನ ನೀಡುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ಈಗಾಗಲೇ ನೀವು ಕೆಲಸ ಮಾಡಿದ್ದೀರಿ, ಅದಕ್ಕಾಗಿ ನಿಮಗೆ ಕೊಡಬೇಕಾದ ಹಣವನ್ನು ಇವತ್ತು- ನಾಳೆ ಎನ್ನುತ್ತಾ ಮುಂದಕ್ಕೆ ಹಾಕುತ್ತಾ ಬರುತ್ತಿರುವವರಿಗೆ ಗಟ್ಟಿಯಾದ ಧ್ವನಿಯಲ್ಲಿ ಕೇಳಲಿದ್ದೀರಿ, ಆ ಹಣ ವಸೂಲಿಯೇ ಆಗಿಬಿಡಲಿದೆ ಅಥವಾ ಇಂಥ ದಿನ ಖಚಿತವಾಗಿ ಹಣ ದೊರೆಯುವ ಭರವಸೆ ಸಿಗಲಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):
ಸಂತೆ ಹೊತ್ತಿಗೆ ಮೂರು ಮೊಳ ಎಂಬ ರೀತಿಯಲ್ಲಿ ಯಾವ ಕೆಲಸವನ್ನು ಸಹ ಮಾಡುವುದಕ್ಕೆ ಹೋಗಬೇಡಿ. ತುರ್ತಾಗಿ ಕೆಲಸ ಮುಗಿಸುವ ಭರದಲ್ಲಿ ಗುಣಮಟ್ಟದ ಜೊತೆ ರಾಜೀ ಮಾಡಿಕೊಂಡು, ದೀರ್ಘಾವಧಿಯಲ್ಲಿ ಅದಕ್ಕಾಗಿ ಪಶ್ಚಾತಾಪ ಪಡುವಂತೆ ಆಗುತ್ತದೆ. ಸೋದರ- ಸೋದರಿಯರ ಜತೆಗಿನ ಭಿನ್ನಾಭಿಪ್ರಾಯ ಈಗಾಗಲೇ ಇದ್ದಲ್ಲಿ ಅದು ವಿಪರೀತಕ್ಕೆ ಹೋಗುವ ಸಾಧ್ಯತೆ ಇರುತ್ತದೆ.
ಲೇಖನ- ಸ್ವಾತಿ ಎನ್.ಕೆ.
Published On – 12:20 am, Sat, 28 February 26
