
ಮಕ್ಕಳೊಂದಿಗೆ ವಾಗ್ವಾದ ತಪ್ಪಿಸಲು ಮತ್ತು ಶಾಂತಿ ಕಾಪಾಡಲು ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ. ಬಿಳಿ ಬಣ್ಣದ ಸಿಹಿತಿಂಡಿಯನ್ನು ನೈವೇದ್ಯ ಮಾಡಿ ಹಂಚಿ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):
ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಬಹಳ ಉತ್ತಮವಾದ ಮಾರ್ಗದರ್ಶನ ದೊರೆಯುವ ಸಾಧ್ಯತೆಗಳು ಹೆಚ್ಚಿವೆ. ಅದೇ ರೀತಿ ಸರ್ಕಾರದಿಂದ ಸಿಗಬೇಕಾದ ಕಾಗದ- ಪತ್ರಗಳಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಅದನ್ನು ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಾನದ ಬಗ್ಗೆ ತಿಳಿದುಬರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗೀ ಆಗುವುದರಿಂದ ನಿಮ್ಮ ಮನಸ್ಸಿಗೆ ತೃಪ್ತಿ- ಸಮಾಧಾನ ದೊರೆಯಲಿದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):
ಪರಿಚಿತರು ದಿಢೀರನೇ ನಿಮಗೆ ಕೆಲವು ವಸ್ತುಗಳನ್ನು ಉಚಿತವಾಗಿ ನೀಡಬಹುದು ಅಥವಾ ತಾವು ಕೆಲವು ಕಾಲ ದೂರದ ಊರಿಗೆ ಹೋಗುತ್ತಿದ್ದೇವೆ, ನಮ್ಮ ಕಾರು ಅಥವಾ ಬೈಕ್/ ಸ್ಕೂಟರ್ ಅನ್ನು ನೀವು ಬಳಸಿಕೊಳ್ಳಿ ಅಂತ ಹೇಳಬಹುದು. ಸಂಗಾತಿಯು ನಿಮ್ಮ ಬಳಿ ಕೆಲವು ಬೇಡಿಕೆಗಳನ್ನು ಇಡುವ ಸಾಧ್ಯತೆಗಳಿವೆ. ತವರು ಮನೆಯಿಂದ ಹೆಣ್ಣುಮಕ್ಕಳಿಗೆ ಬರಬೇಕಾದ ಆಸ್ತಿಯ ಪಾಲು ಏನಾದರೂ ಇದ್ದಲ್ಲಿ ಅದರ ಬಗ್ಗೆ ಒಂದು ತೀರ್ಮಾನ ಆಗುವಂಥ ಸುಳಿವು ದೊರೆಯಲಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):
ಮೂವತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸು ಮಕ್ಕಳು ಯಾರಿಗೆ ಇದ್ದಾರೋ ಅಂಥವರು ಮಕ್ಕಳ ಜತೆಗೆ ಮಾತನಾಡುವಾಗ ಕೋಪ ಮಾಡಿಕೊಳ್ಳದೇ ಇರುವುದು ತುಂಬ ಮುಖ್ಯ. ಮನೆ- ಆಸ್ತಿ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರವೇ ಇರಬಹುದು ಅಥವಾ ಮದುವೆ ಮತ್ಯಾವುದೇ ವಿಷಯ ಇರಬಹುದು, ಅದರ ಬಗ್ಗೆ ನಿಮಗೆ ಸಮ್ಮತಿ ಇಲ್ಲದಿದ್ದರೆ ಸುಮ್ಮನಿದ್ದು ಬಿಡಿ, ಬದಲಿಗೆ ವಾದ- ವಾಗ್ವಾದಗಳನ್ನು ಮಾಡಿಕೊಳ್ಳಬೇಡಿ.
ಲೇಖನ- ಸ್ವಾತಿ ಎನ್.ಕೆ.