ಈ ದಿನ ಪಾರಿವಾಳಗಳಿಗೆ ಕಾಳು- ಕಡಿ ಹಾಕಿದಲ್ಲಿ ಯತ್ನ ಕಾರ್ಯಗಳಲ್ಲಿ ಅನುಕೂಲಗಳು ಆಗಲಿವೆ. ಇನ್ನು ಏನಾದರೊಂದು ಕಾರಣವನ್ನು ಹೇಳಿ, ನಿಮ್ಮ ಕೆಲಸವನ್ನು ಮುಂದಕ್ಕೆ ಹಾಕುತ್ತಾ ಬಂದಿದ್ದಲ್ಲಿ ಅದಕ್ಕೆ ಕೂಡ ಪರಿಹಾರ ದೊರೆಯಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):
ಅಜೀರ್ಣ, ವಿಪರೀತ ಜ್ವರ ಈ ರೀತಿ ತೊಂದರೆಗಳು ಮಕ್ಕಳಿಗೆ ಕಾಣಿಸಿಕೊಂಡಲ್ಲಿ ಕೂಡಲೇ ಸೂಕ್ತ ವೈದ್ಯೋಪಚಾರ ಕೊಡಿಸುವ ಕಡೆಗೆ ಗಮನವನ್ನು ನೀಡಿ. ಸಾವಕಾಶವಾಗಿ ಮಾತನಾಡಿ, ಬಗೆಹರಿಸಿದರಾಯಿತು ಎಂದುಕೊಂಡ ಸಮಸ್ಯೆಯೊಂದು ವಿಕೋಪಕ್ಕೆ ಹೋಗುವುದರಿಂದ ಬಹಳ ಹಿಂಸೆ ಆಗಲಿದೆ. ಯಾವ ವ್ಯಕ್ತಿ ನಿಮ್ಮ ಮಾತನ್ನು ಮೀರುವುದಿಲ್ಲ ಎಂದು ಅಂದುಕೊಂಡಿರುತ್ತೀರೋ ಅಂಥವರೇ ಧ್ವನಿ ಏರಿಸಿ, ನಿಮ್ಮ ಅಭಿಪ್ರಾಯಗಳಿಗೆ- ಸಲಹೆಗಳಿಗೆ ವಿರುದ್ಧವಾಗಿ ಮಾತನಾಡಲಿದ್ದಾರೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):
ನಿಮಗೆ ಮಾತು ನೀಡಿದವರು ಇನ್ಯಾರಿಗೋ ಅನುಕೂಲ ಮಾಡಿಕೊಡುವ ಸಲುವಾಗಿ ನೀಡಿದ್ದ ಭರವಸೆ ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಹೇಳಲಿದ್ದಾರೆ. ಈಗಾಗಲೇ ಸಾಕಷ್ಟು ಹಣ ಖರ್ಚು ಮಾಡಿ, ಮಾಡಿಕೊಂಡ ಸಿದ್ಧತೆ ವ್ಯರ್ಥ ಆಗುತ್ತದೆ ಎಂಬುದು ನಿಮ್ಮನ್ನು ಚಿಂತೆಗೆ ಗುರಿ ಮಾಡಲಿದೆ. ಎರಡು ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಇದ್ದಲ್ಲಿ ಅವರ ಆರೋಗ್ಯ ಸಮಸ್ಯೆಗಳಿಗೆ ಹೆಚ್ಚಿನ ವೆಚ್ಚ ಆಗಲಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):
ಕಡಿಮೆ ಬೆಲೆಗೆ ಸಿಗುತ್ತಿದೆ ಎಂಬ ಕಾರಣಕ್ಕೆ ನಿಮಗೆ ಅಗತ್ಯವೇ ಇಲ್ಲದಿದ್ದರೂ ಕೆಲವು ವಸ್ತುಗಳನ್ನು ಈ ದಿನ ಖರೀದಿ ಮಾಡುವಂತೆ ಆಗಲಿದೆ. ಇನ್ನು ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಅಂತಾದರೆ ಇನ್ನೂ ಹೆಚ್ಚು ಮುಂಜಾಗ್ರತೆ ತೆಗೆದುಕೊಳ್ಳಬೇಕು. ನೀವಾಗಿಯೇ ದುಂಬಾಲು ಬಿದ್ದು ವಹಿಸಿಕೊಂಡಂಥ ಕೆಲಸಗಳನ್ನು ಗಡುವಿನೊಳಗೆ ಮುಗಿಸಿಕೊಡುವುದಕ್ಕೆ ಪ್ರಯತ್ನಿಸಿ.
ಲೇಖನ- ಸ್ವಾತಿ ಎನ್.ಕೆ.
