Headlines

ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ – Kannada News | PM Modi meets President Droupadi Murmu amid speculation over Cabinet reshuffle

ನವದೆಹಲಿ, ಜೂನ್ 23: ಕೇಂದ್ರ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಭಾರಿ ಬದಲಾವಣೆಯಾಗಲಿದೆ ಎಂಬ ವದಂತಿಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಮಂಗಳವಾರ) ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಷ್ಟ್ರಪತಿ ಮತ್ತು ಪ್ರಧಾನಿಯವರ ಈ ದಿಢೀರ್ ಭೇಟಿಯು ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟ ಪುನಾರಚನೆಯ ಸುಳಿವು ನೀಡಿದೆ.

ಕಳೆದ ಕೆಲವು ದಿನಗಳಿಂದ ದೆಹಲಿಯ ರಾಜಕೀಯ ಕಾರಿಡಾರ್‌ಗಳಲ್ಲಿ ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ಬದಲಾವಣೆ ತರಲಾಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಮುಂಬರುವ ಕೆಲವು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಕೆಲವು ಹಿರಿಯ ಸಚಿವರನ್ನು ಪಕ್ಷದ ಸಂಘಟನಾ ಜವಾಬ್ದಾರಿಗೆ ಮುಕ್ತಗೊಳಿಸಿ, ಹೊಸ ಮತ್ತು ಯುವ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿ ಸಚಿವರ ಕಾರ್ಯಕ್ಷಮತೆಯ ವರದಿಯನ್ನು ಆಧರಿಸಿ ಕೆಲವು ಪ್ರಮುಖ ಇಲಾಖೆಗಳ ಜವಾಬ್ದಾರಿಯನ್ನು ಬದಲಾಯಿಸುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ನೆಹರೂ ಅವರಿಂದ ಮೋದಿವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಹಿಳೆಯರ ಪಾತ್ರ ಹೇಗೆಲ್ಲ ಬದಲಾಯ್ತು?

ಸಂಪುಟ ಪುನಾರಚನೆಯ ವದಂತಿಗಳ ಹೊರತಾಗಿ, ಮುಂಬರುವ ಸಂಸತ್ ಜಂಟಿ ಅಧಿವೇಶನ, ದೇಶದ ಪ್ರಸಕ್ತ ಆಂತರಿಕ ಭದ್ರತಾ ಪರಿಸ್ಥಿತಿ ಮತ್ತು ಸರ್ಕಾರದ ಮುಂದಿನ ಪ್ರಮುಖ ಮಸೂದೆಗಳ ಕುರಿತು ಪ್ರಧಾನಿ ಮೋದಿ ಅವರು ರಾಷ್ಟ್ರಪತಿಯವರಿಗೆ ಮಾಹಿತಿ ನೀಡಿರಬಹುದು ಎಂದು ಮೂಲಗಳು ತಿಳಿಸಿವೆ.

ಜೂನ್ 24ರಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಬದಲಾವಣೆಗಳ ಅಧಿಕೃತ ಪ್ರಕಟಣೆ ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆಯಿದೆ. ಇತರ ಪಕ್ಷಗಳನ್ನು ತೊರೆದು ಇತ್ತೀಚೆಗೆ ಎನ್‌ಡಿಎ ಮೈತ್ರಿಕೂಟ ಸೇರಿದ ನಾಯಕರನ್ನು ಸಂಪುಟದಲ್ಲಿ ಸಮಾಧಾನಪಡಿಸುವುದು ಬಿಜೆಪಿಗೆ ಪ್ರಮುಖ ಸವಾಲಾಗಿದೆ.

ಇದನ್ನೂ ಓದಿ: ಮೋದಿ ರಾಜತಾಂತ್ರಿಕತೆ ಯಶಸ್ವಿ; ಬ್ರಿಟನ್, ಕೆನಡಾ ಮತ್ತು ಐರೋಪ್ಯ ಒಕ್ಕೂಟದಿಂದ ಭಾರತಕ್ಕೆ ಭಾರಿ ಆರ್ಥಿಕ ಲಾಭ!

ಏಪ್ರಿಲ್‌ನಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಬಂದು ಬಿಜೆಪಿ ಸೇರಿದ ರಾಘವ್ ಚಡ್ಡಾ ನೇತೃತ್ವದ 7 ರಾಜ್ಯಸಭಾ ಸಂಸದರ ಗುಂಪು ಸಚಿವ ಸ್ಥಾನದ ರೇಸ್‌ನಲ್ಲಿದೆ. ಇದರೊಂದಿಗೆ ತೃಣಮೂಲ ಕಾಂಗ್ರೆಸ್ (TMC) ಬಂಡಾಯ ಬಣದ ಕಾಕೋಲಿ ಘೋಷ್ ದಸ್ತಿದಾರ್ ಗುಂಪು ಮತ್ತು ಉದ್ಧವ್ ಠಾಕ್ರೆ ಬಣದಿಂದ ಹೊರಬಂದು ಏಕನಾಥ್ ಶಿಂಧೆ ಶಿವಸೇನೆಗೆ ಸೇರಿದ ಸಂಸದರಿಗೂ ಸ್ಥಾನ ನೀಡಬೇಕಾಗಬಹುದು.

ಸಂಸತ್ತಿನಲ್ಲಿ ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಮತ್ತು ಸಂವಿಧಾನಿಕ ತಿದ್ದುಪಡಿಗಳಿಗೆ ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಭದ್ರಪಡಿಸಿಕೊಳ್ಳಲು ಸಣ್ಣ ಪುಟ್ಟ ಪಕ್ಷಗಳು ಮತ್ತು ಸ್ವತಂತ್ರ ಸಂಸದರನ್ನು ಸೆಳೆಯುವ ತಂತ್ರ ಇದರ ಹಿಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *