ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ? – Kannada News | High Level Meeting In Delhi for Karnataka Cabinet expansion And KPCC bearers Appointment

ನವದೆಹಲಿ, (ಜುಲೈ 16): ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಈ ಸಂಬಂಧ ದೆಹಲಿಯಲ್ಲಿ ಸುರ್ಜೆವಾಲಾ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ವರಿಷ್ಠರ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಪಡೆದುಕೊಳ್ಳಲು ಅನೇಕ ಮಂದಿ ಪ್ರಯತ್ನ ನಡೆಸುತ್ತಿದ್ದಾರೆ. ಇಪ್ಪತ್ತು ಸ್ಥಾನಗಳ ಪೈಕಿ ಐವತ್ತು ಮಂದಿ ಲಾಬಿ ನಡೆಸುತ್ತಿದ್ದಾರೆ. ಆದರೆ ಎಷ್ಟು ಜನರಿಗೆ ಈ ಬಾರಿ ಅವಕಾಶ ಸಿಗುತ್ತದೆ? ಯಾರಿಗೆಲ್ಲಾ ಮಂತ್ರಿ ಸ್ಥಾನ? ಸಿಗಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ವರಿಷ್ಠರ ಜೊತೆಗೆ ಚರ್ಚೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಪಕ್ಷ ಸಂಘಟನೆಗಾಗಿ ಕೆಪಿಸಿಸಿಗೆ ಪದಾಧಿಕಾರಿಗಳ ಆಯ್ಮೆ ಬಗ್ಗೆಯೂ ಮಾತುಕತೆಗಳು ನಡೆದಿವೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಕೆಪಿಸಿಸಿ ಮಹಿಳಾ ಕಾರ್ಯಧ್ಯಕ್ಷೆ ಹಾಗೂ ನೂತನ ಡಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆಯೂ ಸಭೆಯಲ್ಲಿ ಚರ್ಚೆಗಳು ನಡೆದಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *