ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ: ಕೈಮುಗಿದರೂ ಬಿಡದ ಕಿಡಿಗೇಡಿಗಳು

ಸಕಲೇಶಪುರ, ಮಾ.28: ಸಿನೆಮಾಗಳ ಚಿತ್ರೀಕರಣಕ್ಕೆ ಹೆಸರಾದ ಹಾಸನದ ಸಕಲೇಶಪುರ ತಾಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ತಾರಕಕ್ಕೇರಿ ಪೊಲೀಸ್ ಠಾಣೆಯ ಮುಂದೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಬೆಟ್ಟದ ಭೈರವೇಶ್ವರ ದೇಗುಲದ ಸುಂದರ ಪರಿಸರದಲ್ಲಿ ಇಂದು ಮುಂಜಾನೆ ಬೆಂಗಳೂರು ಮತ್ತು ಹಾಸನದಿಂದ ಬಂದಿದ್ದ ನಾಲ್ಕು ಫೋಟೋಗ್ರಫಿ ತಂಡಗಳು ಶೂಟಿಂಗ್‌ನಲ್ಲಿ ನಿರತವಾಗಿದ್ದವು. ಈ ವೇಳೆ ಅಲ್ಲಿಗೆ ಬಂದ ಸ್ಥಳೀಯ ಕೆಲ ಕಿಡಿಗೇಡಿಗಳು, “ದೇವಸ್ಥಾನದ ಪಾವಿತ್ರತೆಗೆ ಧಕ್ಕೆ ತರುತ್ತಿದ್ದೀರಿ” ಎಂದು ಆರೋಪಿಸಿ ವಿನಾಕಾರಣ ಗಲಾಟೆ ಆರಂಭಿಸಿದ್ದಾರೆ. ಫೋಟೋಗ್ರಾಫರ್‌ಗಳು ಕೈಮುಗಿದು ಬೇಡಿಕೊಂಡರೂ ಕೇಳದ ಪುಂಡರು ಚೇತನ್, ಯಶು ಮತ್ತು ಸೋಮಶೇಖರ್ ಎಂಬುವವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ.

ಹಲ್ಲೆಕೋರರು ಲಕ್ಷಾಂತರ ರೂಪಾಯಿ ಬೆಲೆಯ ಕ್ಯಾಮೆರಾ, ಮೊಬೈಲ್‌ಗಳನ್ನು ಜಖಂಗೊಳಿಸಿದ್ದಾರೆ. ಮೇಕಪ್ ಆರ್ಟಿಸ್ಟ್‌ಗಳ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ದೂರು ನೀಡಲು ಸಕಲೇಶಪುರ ಗ್ರಾಮಾಂತರ ಠಾಣೆಗೆ ಬಂದಾಗ, ಪೊಲೀಸರ ಸಮ್ಮುಖದಲ್ಲೇ ಎರಡೂ ಗುಂಪುಗಳ ನಡುವೆ ಮತ್ತೆ ವಾಗ್ವಾದ ನಡೆದು ಮಾರಾಮಾರಿ ಸಂಭವಿಸಿದೆ. ಹಲ್ಲೆಗೊಳಗಾದ ಫೋಟೋಗ್ರಾಫರ್ ಒಬ್ಬರು ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೊಂದೆಡೆ ಸ್ಥಳೀಯರು, “ಇದು ಪ್ರವಾಸಿ ತಾಣವಲ್ಲ, ನಮ್ಮ ಶ್ರದ್ಧಾ ಕೇಂದ್ರ. ಇಲ್ಲಿಗೆ ಬರುವವರು ಅಸಭ್ಯ ಉಡುಗೆ ತೊಟ್ಟು ಪಾವಿತ್ರತೆ ಹಾಳು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಸುತ್ತಲೂ ಬೇಲಿ ಹಾಕಿ ಧಾರ್ಮಿಕ ಕೇಂದ್ರವನ್ನು ರಕ್ಷಿಸುವಂತೆ ಅವರು ಒತ್ತಾಯಿಸಿದ್ದಾರೆ. ಸದ್ಯ ಸಕಲೇಶಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಇನ್ನು ದೇವಾಲಯದಲ್ಲಿ ಫೋಟೋಶೂಟ್​​ ಮಾಡುವಾಗ ಕೆಲವೊಂದು ಕ್ರಮಗಳನ್ನು ಹಾಗೂ ನಿಯಮಗಳನ್ನು ಪಾಲಿಸಲೇಬೇಕು. ದೇವಸ್ಥಾನಗಳು ಕೇವಲ ಪ್ರವಾಸಿ ತಾಣಗಳಲ್ಲ, ಅವು ನಂಬಿಕೆಯ ಕೇಂದ್ರಗಳು. ಅಲ್ಲಿ ಶೂಟಿಂಗ್ ಮಾಡುವಾಗ ಈ ಕೆಳಗಿನ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಫೋಟೋಗ್ರಾಫರ್‌ಗಳು ಮತ್ತು ಜೋಡಿಗಳ ಕರ್ತವ್ಯ. ದೇವಸ್ಥಾನದ ಆಡಳಿತ ಮಂಡಳಿ ಅಥವಾ ಮುಜರಾಯಿ ಇಲಾಖೆಯಿಂದ ಲಿಖಿತ ಅನುಮತಿ ಪಡೆಯುವುದು ಒಳಿತು. ಖಾಸಗಿ ದೇವಸ್ಥಾನವಾಗಿದ್ದರೆ ಅಲ್ಲಿನ ಅರ್ಚಕರು ಅಥವಾ ಧರ್ಮದರ್ಶಿಗಳ ಗಮನಕ್ಕೆ ತರಬೇಕು. ಒಂದು ವೇಳೆ ಈ ಕೆಲಸ ಮಾಡದಿದ್ದರೆ ಇಂತಹ ಘಟನೆಗಳು ನಡೆಯುತ್ತದೆ. ಗರ್ಭಗುಡಿಯ ಒಳಗೆ ಅಥವಾ ದೇವಸ್ಥಾನದ ಆವರಣದಲ್ಲಿ ಪಾದರಕ್ಷೆ ಧರಿಸಿ ಶೂಟಿಂಗ್ ಮಾಡಬಾರದು. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಭಂಗಿಗಳಲ್ಲಿ ಫೋಟೋ ತೆಗೆಯಬಾರದು ಎಂಬ ಬಗ್ಗೆ ಮೊದಲೇ ಆಲೋಚನೆ ಇರಬೇಕು. ದೇವಸ್ಥಾನದ ಮರ್ಯಾದೆಗೆ ತಕ್ಕಂತೆ ಸಾಂಪ್ರದಾಯಿಕ ಅಥವಾ ಸಭ್ಯ ಉಡುಗೆಗಳನ್ನು ತೊಡುವುದು ಉತ್ತಮ. ಅತಿಯಾದ ಮಾಡರ್ನ್ ಅಥವಾ ಅಸಭ್ಯ ಉಡುಗೆಗಳು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಬಹುದು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *