ಹಾಸನ, ಜುಲೈ 09: ಜಿಲ್ಲೆಯ ಸಕಲೇಶಪುರ ತಾಲೂಕು ಪ್ರದೇಶದಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಭೂಕುಸಿತದ ಆತಂಕ ಎದುರಾಗುತ್ತದೆ. ಕೇರಳದಲ್ಲಿ ಸಂಭವಿಸಿದ ಭೂದುರಂತದ ಹಿನ್ನೆಲೆಯಲ್ಲಿ, ಸಕಲೇಶಪುರದ ಆನೆಮಹಲ್ ಬಳಿಯ ಹತ್ತಾರು ಕುಟುಂಬಗಳು ಜೀವಭಯದಲ್ಲಿವೆ. ಕಳೆದ ವರ್ಷ ಜಿಲ್ಲಾಡಳಿತವು ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿತ್ತು. ಆದರೆ, ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಮಳೆ ಆರಂಭವಾದಾಗ ಮನೆ ಖಾಲಿ ಮಾಡಲು ಸೂಚನೆ ನೀಡಲಾಗುತ್ತಿದೆ. ಪರ್ಯಾಯ ವ್ಯವಸ್ಥೆ ಇಲ್ಲದೆ ಎಲ್ಲಿಗೆ ಹೋಗುವುದು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
