Headlines

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿಗರ ಟೀಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು – Kannada News | KPCC President B.K. Hariprasad Hits Back at BJP Over Cabinet Expansion Criticism

ಬೆಂಗಳೂರು, ಆಗಸ್ಟ್​​ 05: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಲೇವಡಿ ವಿಚಾರ ಸಂಬಂಧ ಬಿಜೆಪಿಗರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೂಟ್​ಕೇಸ್, ಬ್ರೀಫ್​ಕೇಸ್, ಆಪರೇಷನ್ ಕಮಲ ಮಾಡಿದ್ಯಾರು? ಕಾಂಗ್ರೆಸ್, JDSನ 16 ಶಾಸಕರನ್ನು ಬಾಂಬೆಗೆ ಕರೆದೊಯ್ದಿದ್ಯಾರು? ಎಂದವರು ಪ್ರಶ್ನಿಸಿದ್ದಾರೆ. ಬಾಂಬೆ ಬಾಯ್ಸ್ ಗೋಣಿ ಚೀಲ ಹಿಡಿದುಕೊಂಡು ಹೋಗಿದ್ರಂತಾ? ರಾಜ್ಯ ಬಿಜೆಪಿ ಅಧ್ಯಕ್ಷ, ಆರ್.ಅಶೋಕ್ ಎಷ್ಟು ಕೋಟಿಗೆ ಬಾಳ್ತಾರೆ? ಸುಮ್ಮನೆ ನನ್ನನ್ನು ಇವರ ಚಾರ್ಟರ್ಡ್ ಅಕೌಂಟೆಂಟ್​ ಮಾಡಬೇಡಿ. ಪ್ರತಿಪಕ್ಷ ಬಿಜೆಪಿ ನಾಯಕರು ಮಾತೆತ್ತಿದ್ದರೆ ಗಂಜಲ, ಹೊಲಸು. ವಿಪಕ್ಷ ನಾಯಕರಿಗೆ ಸಾಮಾಜಿಕ ನ್ಯಾಯ ಅಂದ್ರೆ ಏನೆಂದು ಗೊತ್ತಿಲ್ಲ ಎಂದವರು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *