ಬೆಂಗಳೂರು, ಮಾರ್ಚ್ 05): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಒಳ ಮೀಸಲಾತಿ (internal reservation ) ಗೊಂದಲ ಜೋರಾಗಿದ್ದು, ಕಾಂಗ್ರೆಸ್ ನಾಯಕರುಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಸಂಬಂಧ ಇಂದು (ಮಾರ್ಚ್ 05) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲೂ ಸಹ ಒಳ ಮೀಸಲಾತಿ ವಿಚಾರವಾಗಿ ಭಾರೀ ಚರ್ಚೆಯಾಗಿದೆ. ಆದ್ರೆ, ಸಂಪುಟದಲ್ಲಿ ಸಹಮತ ಮೂಡದ ಕಾರಣ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸಂಪುಟ ಸಭೆ ಸೇರಿ ತೀರ್ಮಾನಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮತ್ತೊಂದು ಬೆಳವಣಿಗೆ: ಸಮುದಾಯದ ನಾಯಕರ ನಡುವೆ ಅಸಮಾಧಾನ ಸ್ಫೋಟ