ಸಚಿವ ಸ್ಥಾನ ವಂಚಿತ ಸುಬ್ಬಾರೆಡ್ಡಿ ಬೆಂಬಲಿಸಿ ಮೂರು ತಾಲೂಕುಗಳು ಬಂದ್: ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ – Kannada News | Bagepalli, Gudibande, Chelur Bandh Over Denial of Ministerial Post to SN Subbareddy

ಚಿಕ್ಕಬಳ್ಳಾಪುರ, ಆಗಸ್ಟ್ 5: ಸಚಿವ ಸ್ಥಾನ ವಂಚಿತ ಶಾಸಕರ ಆಕ್ರೋಶದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮೂರು ತಾಲೂಕುಗಳಾದ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರಿನಲ್ಲಿ ಇಂದು ಸಂಪೂರ್ಣ ಬಂದ್​ಗೆ ಕರೆ ನೀಡಲಾಗಿದೆ. ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಅವರ ಬೆಂಬಲಿಗರು ಕಿಚ್ಚು ಹೊರಹಾಕುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗೇಪಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಂದ್‌ಗೆ ಮೊದಲೇ ಪ್ರಚಾರ ನೀಡಲಾಗಿತ್ತು ಎಂದು ಯೂತ್ ಕಾಂಗ್ರೆಸ್ ಮುಖಂಡ ನರೇಂದ್ರ ತಿಳಿಸಿದ್ದಾರೆ. ಈ ಬಂದ್‌ಗೆ ಸುಬ್ಬಾರೆಡ್ಡಿ ಅವರ ಬೆಂಬಲವಿಲ್ಲ, ಬದಲಾಗಿ ಸಾರ್ವಜನಿಕರ ಆಕ್ರೋಶವೇ ಕಾರಣ ಎಂದು ಬೆಂಬಲಿಗರು ಹೇಳುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *