ಮೈಸೂರು, (ಜೂನ್ 24): ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಂಜುನಾಥಗೆ ಸೇರಿದ ಬೆಳಗಾವಿ, ಬೆಂಗಳೂರು ಸೇರಿದಂತೆ ಎಲ್ಲಾ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೈಸೂರಿನಲ್ಲಿ ಮಂಜುನಾಥ್ ಅವರ ಸ್ನೇಹಿತಯ ಮನೆ ಮೇಲೆ ದಾಳಿಯಾಗಿದೆ. ಹೌದು…ಮಂಜುನಾಥ್ ಹೆಸರಿನಲ್ಲಿರುವ ಮನೆಯಲ್ಲಿ ಅವರ ಗೆಳತಿ ವಾಸ ಮಾಡುತ್ತಿದ್ದು, ಇದೀಗ ಈ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ದಟ್ಟಗಳ್ಳಿ ನಿವಾಸದಲ್ಲಿ ಮಂಜುನಾಥ್ ಆಪ್ತ ಸ್ನೇಹಿತೆ ಯಮುನಾ, ಆಕೆಯ ತಾಯಿ ವಾಸವಿದ್ದು, ಮಂಜುನಾಥ್ಗೆ ಸೇರಿದ ಮನೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
