ಸತೀಶ್ ಜಾರಕಿಹೊಳಿ ಹೊಸ ಬಾಂಬ್: ‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ – Kannada News

ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿImage Credit source: Tv9 kannada

ಬೆಂಗಳೂರು, ಜೂ.5: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಉಂಟಾಗಿರುವ ಭಿನ್ನಾಭಿಪ್ರಾಯ ಹಾಗೂ ರಾಜೀನಾಮೆ ಗದ್ದಲದ ನಡುವೆ, ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅವರು ಅತ್ಯಂತ ಸಮಚಿತ್ತದ ಹಾಗೂ ವಾಸ್ತವಿಕ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಅಸಮಾಧಾನದ ಬೆಂಕಿಯನ್ನು ನಂದಿಸುವ ಸಂಪೂರ್ಣ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ ಸ್ಥಾನದ ರಾಜೀನಾಮೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅತ್ಯಂತ ಹಗುರವಾಗಿ ಉತ್ತರಿಸಿದ ಜಾರಕಿಹೊಳಿ, “ಅವರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ಆದರೆ ಈ ಇಡೀ ಪರಿಸ್ಥಿತಿಯನ್ನು ಸಮಾಧಾನಪಡಿಸುವ ಹಾಗೂ ಪರ್ಯಾಯ ವ್ಯವಸ್ಥೆ ಮಾಡುವ ಸಂಪೂರ್ಣ ಸಾಮರ್ಥ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಈ ಎಲ್ಲ ಸಮಸ್ಯೆಗಳು ಸರಿಹೋಗುತ್ತವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಸಚಿವ ಕೆ.ಎಚ್. ಮುನಿಯಪ್ಪ ಅವರ ಅಸಮಾಧಾನದ ಕುರಿತು ಮಾತನಾಡಿದ ಅವರು, “ರಾಜಕಾರಣದಲ್ಲಿ ಪ್ರಮೋಷನ್ ಅಥವಾ ಉನ್ನತ ಹುದ್ದೆಗಳ ಬಯಕೆ ಇರುವುದು ತೀರಾ ಸಾಮಾನ್ಯ. ಆದರೆ ಎಲ್ಲರಿಗೂ ಉನ್ನತ ಸ್ಥಾನಗಳನ್ನು ನೀಡಲು ಸಾಧ್ಯವಿಲ್ಲ, ಕೆಲವರಿಗೆ ಮಾತ್ರ ಅದು ಲಭ್ಯವಾಗುತ್ತದೆ. ಈ ಎಲ್ಲ ಗೊಂದಲಗಳನ್ನು ಸಿಎಂ ಬಗೆಹರಿಸಲಿದ್ದಾರೆ, ಅಲ್ಲಿಯವರೆಗೆ ಒಂದು-ಎರಡು ದಿನ ಕಾಯೋಣ” ಎಂದು ಹೇಳಿದ್ದಾರೆ.

ನಿಮಗೆ ಡಿಸಿಎಂ (DCM) ಸ್ಥಾನ ಅಥವಾ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನ ಸಿಗದಿರುವುದು ಅಸಮಾಧಾನ ತಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಆಸೆ ಇತ್ತು, ಆದರೆ ಏನು ಮಾಡಲಿಕ್ಕೆ ಆಗಲ್ಲ. ಸಿಕ್ಕಿದ್ದಕ್ಕೆ ಸಮಾಧಾನ, ತೃಪ್ತಿ ಪಡಬೇಕು ಅಷ್ಟೇ” ಎಂದು ತಮ್ಮ ವೈಯಕ್ತಿಕ ಮಹತ್ವಾಕಾಂಕ್ಷೆಗಳ ಬಗ್ಗೆ ಹೇಳಿದ್ದಾರೆ. ಅಲ್ಲದೆ, ತಾವು ರಾಜೀನಾಮೆ ನೀಡುವ ಬಗ್ಗೆ ಸ್ಪಷ್ಟವಾಗಿ ನಿರಾಕರಿಸಿದ ಸಚಿವರು, “ರಾಜೀನಾಮೆ ಯಾಕೆ ಕೊಡಬೇಕು? ಅದರ ಅವಶ್ಯಕತೆ ಇಲ್ಲ. ನಮಗೆ ಯಾವ ಖಾತೆ ಇದೆಯೋ, ಅದನ್ನೇ ಮುಂದುವರಿಸಿದ್ದಾರೆ, ನಾನು ಕೆಲಸ ಮಾಡುತ್ತೇನೆ” ಎಂದರು.

ಇದನ್ನೂ ಓದಿ: ರಾಮಲಿಂಗಾ ರೆಡ್ಡಿ ರಾಜೀನಾಮೆ ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಹೆಚ್​ಕೆ ಪಾಟೀಲ್ ಶಾಕಿಂಗ್ ಮಾತು

ಸಚಿವರುಗಳಲ್ಲಿ ಮೊದಲು ನೊಂದವರು ನೀವು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಯಾವುದೇ ನೋವೂ ಇಲ್ಲ, ಸಂತೋಷವೂ ಇಲ್ಲ, ದುಃಖವೂ ಇಲ್ಲ ಎಂದು ಹೇಳುವ ಮೂಲಕ ಪ್ರಸ್ತುತ ರಾಜಕೀಯ ಹೈಡ್ರಾಮಾದ ನಡುವೆ ತಾವು ಸಂಪೂರ್ಣ ಸಮಚಿತ್ತದಿಂದ ಇರುವುದಾಗಿ ಈ ಮೂಲಕ ಹೇಳಿಕೊಂಡಿದ್ದಾರೆ. ಜಾರಕಿಹೊಳಿ ಅವರ ಈ ನಡೆ ಸಂಪುಟದ ಇತರ ರೆಬೆಲ್ ನಾಯಕರಿಗೆ ಪರೋಕ್ಷ ಸಂದೇಶ ರವಾನಿಸಿದಂತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *