ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ ನನಗೆ ಗೆಲುವಾಗಿದೆ, ನನ್ನ ಕಾರ್ಯಕರ್ತರು ಸಂಭ್ರಮ ಪಡುವಂತಾಗಿದೆ. ನನ್ನ ವಿರುದ್ಧ ನಿರಂತರವಾಗಿ ಆರೋಪ ಮಾಡುತ್ತಿದ್ದರು. ಆದರೆ ಸತ್ಯಕ್ಕೆ ಜಯವಾಗಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.