Headlines

ಸಮುದ್ರದ ನೀರಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ಪಾಲಿಗೆ ದೇವರಾದ ಕ್ರಿಕೆಟ್​​ ಆಡುತ್ತಿದ್ದ ಯುವಕರು – Kannada News | Karwar Youths Heroically Rescue Two Drowning Tourists at Rabindranath Tagore Beach

ಕಾರವಾರ, ಮೇ 14: ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ಈಜಲೆಂದು ಸಮುದ್ರಕ್ಕೆ ಇಳಿದಿದ್ದ ಇಬ್ಬರು ಪ್ರವಾಸಿಗರು, ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಲ್ಲಿ ಮುಳುಗಲು ಪ್ರಾರಂಭಿಸಿದ್ದರು. ಈ ಸಂದರ್ಭದಲ್ಲಿ, ಕಡಲತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಐವರು ಯುವಕರು ಪ್ರವಾಸಿಗರು ಮುಳುಗುತ್ತಿರುವುದನ್ನು ಗಮನಿಸಿ ತಕ್ಷಣ ಅವರ ಸಹಾಯಕ್ಕೆ ಧಾವಿಸಿದ್ದಾರೆ. ಗೌತಮ್ ಬಾನಾವಳಿ, ಸಾಯಿನಾಥ್, ವಿಘ್ನೇಶ್, ಅಮನ್ ಮತ್ತು ಅಜಯ್ ಎಂಬ ಯುವಕರು ಅಪಾಯದಲ್ಲಿದ್ದ ಪ್ರವಾಸಿಗರನ್ನು ಸುರಕ್ಷಿತವಾಗಿ ನೀರಿಂದ ಹೊರ ತರುವಲ್ಲಿ ಯಶಸ್ವಿಯಾಗಿದ್ದಾರೆ. ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *