ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ನವದೆಹಲಿ, ಮಾರ್ಚ್ 19: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಇಂದು ಪಶ್ಚಿಮ ಏಷ್ಯಾದ ಸಂಘರ್ಷದ ಬಗ್ಗೆ ಕೇಂದ್ರ ಸರ್ಕಾರದ ಮೌನದ ಮತ್ತು ತಟಸ್ಥ ನಿಲುವನ್ನು ಬೆಂಬಲಿಸಿದ್ದಾರೆ. ಒಂದೆಡೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯ (PM Modi) ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರೆ ಇನ್ನೊಂದೆಡೆ ಅದೇ ಪಕ್ಷದ ಸಂಸದ ಮನೀಶ್ ತಿವಾರಿ ಬಿಜೆಪಿ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ! ಭಾರತವು ಇತಿಹಾಸದಿಂದಲೂ ಇಸ್ರೇಲ್ ಮತ್ತು ಇರಾನ್ ಪ್ರದೇಶದಲ್ಲಿ ಸೀಮಿತ ಪಾತ್ರವನ್ನು ವಹಿಸಿದೆ. ಅದು ನಮ್ಮ ಯುದ್ಧವಲ್ಲ ಹೀಗಾಗಿ ಅದರಲ್ಲಿ ನಾವು ಮೂಗು ತೂರಿಸುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ ಸರಿಯಾಗಿಯೇ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಇರಾನ್, ಇಸ್ರೇಲ್ ಮತ್ತು ಯುಎಸ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ಕುರಿತು ಮಾತನಾಡಿದ ಅವರು, ಬಿಕ್ಕಟ್ಟಿನ ಪ್ರಮಾಣ ಮತ್ತು ಸಂಕೀರ್ಣತೆಯನ್ನು ಗಮನಿಸಿದರೆ ಭಾರತದ ಎಚ್ಚರಿಕೆಯ ರಾಜತಾಂತ್ರಿಕ ವಿಧಾನವು ಸೂಕ್ತವಾಗಿದೆ ಎಂದು ಹೇಳಿದ್ದಾರೆ. “ಇಸ್ರೇಲ್ ಮತ್ತು ಇರಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಏನಾಗುತ್ತಿದೆ ಎಂಬುದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಒಂದು ದೇಶದ ಪರವಾಗಿ ನಿಲ್ಲುವುದು ಸೂಕ್ತವಲ್ಲ. ಅದು ನಮ್ಮ ಯುದ್ಧವಲ್ಲ. ನಾವು ಯಾವಾಗಲೂ ಗ್ರೇಟರ್ ಮಧ್ಯಪ್ರಾಚ್ಯದಲ್ಲಿ ಸ್ವಲ್ಪಮಟ್ಟಿಗೆ ಸೀಮಿತ ವಹಿವಾಟವನ್ನು ಮತ್ತು ಪಾತ್ರವನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುದ್ಧದ ನಡುವೆಯೂ ಅರ್ಮೇನಿಯಾ ಮೂಲಕ ಇರಾನ್​ನಿಂದ 550 ಭಾರತೀಯರ ಸ್ಥಳಾಂತರ

ಇಂತಹ ಸಂದರ್ಭದಲ್ಲಿ ಭಾರತವು ಜಾಗರೂಕತೆಯಿಂದ ವರ್ತಿಸುವ ಮೂಲಕ ಸರಿಯಾದದ್ದನ್ನೇ ಮಾಡುತ್ತಿದೆ. ನಾವು ಜಾಗರೂಕರಾಗಿದ್ದುಕೊಂಡು ಸರಿಯಾದದ್ದನ್ನು ಮಾಡುತ್ತಿದ್ದೇವೆ ಎಂದು ನಾನು ಭಾವಿಸುತ್ತೇನೆ. ಬಿಕ್ಕಟ್ಟಿನ ಆರಂಭದಿಂದಲೂ ಭಾರತವು ಮಾತುಕತೆ ಮತ್ತು ರಾಜತಾಂತ್ರಿಕತೆಗೆ ನಿರಂತರವಾಗಿ ಕರೆ ನೀಡಿದೆ. ಫೆಬ್ರವರಿ 28ರಂದು ಯುಎಸ್ ಮತ್ತು ಇಸ್ರೇಲ್ ಇರಾನ್ ಒಳಗೆ ಜಂಟಿಯಾಗಿ ದಾಳಿಗಳನ್ನು ನಡೆಸಿ, ಹಲವಾರು ಸ್ಥಳಗಳನ್ನು ನಾಶ ಮಾಡಿದ ನಂತರ ಸಂಘರ್ಷ ಪ್ರಾರಂಭವಾಯಿತು. ಇದಕ್ಕೆ ಪ್ರತಿಯಾಗಿ ಇರಾನ್ ತನ್ನದೇ ಆದ ದಾಳಿಯೊಂದಿಗೆ ಸೇಡಿನ ದಾಳಿ ನಡೆಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *