ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಬೀದರ್​, ಜನವರಿ 02: ಹೊಸ ವರ್ಷ ಹಿನ್ನೆಲೆ ಬೀದರ್ ತಾಲ್ಲೂಕಿನ ರಂಜೋಳಖೇಣಿ ಗ್ರಾಮದ ಸರ್ಕಾರ ಶಾಲಾ ಮಕ್ಕಳು ವಿಶೇಷ ಬಜ್ಜಿ ಮತ್ತು ಕಟಕ್ ರೊಟ್ಟಿ ಊಟ ಸವಿದರು. ಮುಖ್ಯೋಪಾಧ್ಯಾಯ ಮಂಜುನಾಥ್​,​ ಶಿಕ್ಷಕರಾದ ಚಂದ್ರಕಾಂತ್ ಹಿಂದೊಡ್ಡಿ, ವಿಷ್ಣು ಕಾಂತ್ ಠಾಕೂರ್​​ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಕಾರಹುಣ್ಣಿಮೆ‌ಯ ದಿನ ರೈತರು ಹೊಲಕ್ಕೆ ಹೋಗಿ ಭೂತಾಯಿಗೆ ಪೂಜೆ ಮಾಡಿ ಬಜ್ಜಿ ಊಟ ಸವಿಯುವುದು ಇಲ್ಲಿನ‌ ವಾಡಿಕೆ. ಹೀಗಾಗಿ ಈ ಹೊಸ ವರ್ಷದಂದು ಹೊಸತನದಿಂದ ಕೂಡಿರಲೆಂದು ಬಜ್ಜಿ ಊಟದ ವ್ಯವಸ್ಥೆ ಮಾಡಲಾಗಿದೆ. ಅವರೆಕಾಯಿ, ಕಡಲೆ, ತೊಗರೆ, ಶೇಂಗಾ ಹೀಗೆ ವಿವಿಧ ಬಗೆಯ ತರಕಾರಿ ಸೇರಿಸಿ ಬಜ್ಜಿ ತಯಾರಿಸಲಾಗಿದ್ದು, ಮಕ್ಕಳು ಚಪ್ಪರಿಸಿ ತಿಂದರು. ಶಿಕ್ಷಕರ ಈ ಕಾರ್ಯಕ್ಕೆ‌ ಮಕ್ಕಳು ‌ಫುಲ್ ಖುಷಿ ಪಟ್ಟರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *