
ಧಾರವಾಡ, ಮಾರ್ಚ್ 09: ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಮುದ್ದಿನ ಸಾಕು ನಾಯಿಗೆ ಕುಟುಂಬಸ್ಥರು ಅದ್ದೂರಿಯಾಗಿ ಸೀಮಂತ ಕಾರ್ಯಕ್ರಮ ಮಾಡಿದ್ದಾರೆ. ಮಹದೇವಿ ನಾಯ್ಕರ್ ಅವರ ಮನೆಯವರು ಗರ್ಭಿಣಿಯಾಗಿದ್ದ ಡಾಬರಮನ್ ತಳಿಯ ಶ್ವಾನಕ್ಕೆ ಮುತ್ತೈದೆಯರನ್ನು ಕರೆಯಿಸಿ ಉಡಿ ತುಂಬಿಸಿದ್ದಾರೆ. ಅನೇಕ ಧಾರ್ಮಿಕ ವಿಧಿ ವಿಧಾನದಂತೆ ಸೀಮಂತ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಗ್ರಾಮದ ಜನರು ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.