ಸಿಎಂ ಆಗಿ ಪ್ರಮಾಣವಚನದ ಬೆನ್ನಲ್ಲೇ ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್​​: ಇಲ್ಲಿದೆ ಮಾಹಿತಿ – Kannada News

ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್Image Credit source: DK Shivakumar X Account

ಬೆಂಗಳೂರು, ಜೂನ್​​ 03: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ (DK Shivakumar)​​ ಭಾವನಾತ್ಮಕವಾಗಿ ಪೋಸ್ಟ್​​ ಮಾಡಿದ್ದಾರೆ. ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿದ್ದೀರಿ. ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದೇನೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಡಿಕೆಶಿ ಪೋಸ್ಟ್​​ನಲ್ಲಿ ಏನಿದೆ?

ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ. ಈ ಅವಕಾಶ ನನಗೆ ಕರುಣಿಸಿದ ಹಿರಿಯರಿಗೆ, ಮಾರ್ಗದರ್ಶಕರಿಗೆ ಹಾಗೂ ನನ್ನ ಶಕ್ತಿಯಾಗಿ ನಿಂತ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ನಮ್ಮ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ. ಈ ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆ ಶಿವಕುಮಾರ್​​ರಿಂದ ದೀರ್ಘದಂಡ ನಮಸ್ಕಾರ

‘ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ’

ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಹೀಗಾಗಿ ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ಸಿಎಂ ಡಿ.ಕೆ. ಶಿವಕುಮಾರ್​​ ಕರೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *