Headlines

ಸಿಎಂ ಪತ್ನಿಯಂತೆ ತ್ರಿಷಾಗೆ ರಾಜ ಮರ್ಯಾದೆ; ಶುವಾಯ್ತು ಚರ್ಚೆ

ತಮಿಳುನಾಡಿನ ರಾಜಕೀಯಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟು, ಮುಖ್ಯಮಂತ್ರಿಯಾಗಿರುವ ದಳಪತಿ ವಿಜಯ್ ಅವರ ಕೆಲವು ವೈಯಕ್ತಿಕ ನಡೆಗಳು ಈಗ ಭಾರಿ ಚರ್ಚೆಗೆ ಕಾರಣವಾಗಿವೆ. ಆರಂಭದಲ್ಲಿ ಅವರು ತಮ್ಮ ಜ್ಯೋತಿಷಿಯನ್ನು ಸಲಹೆಗಾರರನ್ನಾಗಿ ನೇಮಿಸಿ ಟೀಕೆಗೆ ಒಳಗಾಗಿದ್ದರು. ಆದರೆ ಆ ತಪ್ಪು ತಿದ್ದಿಕೊಂಡು ಆದೇಶ ಹಿಂಪಡೆದಿದ್ದರು. ಮತ್ತೊಮ್ಮೆ ವಿಜಯ್ (Vijay) ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಇತ್ತೀಚೆಗಷ್ಟೇ ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅಜಿತ್ ಅವರಿಗೆ ಸಾಂತ್ವನ ಹೇಳಲು ವಿಜಯ್ ಅವರು ಅಜಿತ್ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ ಈ ವೇಳೆ ವಿಜಯ್ ಒಬ್ಬರೇ ಹೋಗದೆ, ಅವರ ಜೊತೆ ನಟಿ ತ್ರಿಷಾ ಕೃಷ್ಣನ್ ಕೂಡ ಕಾಣಿಸಿಕೊಂಡಿರುವುದು ಈಗ ಚರ್ಚೆ ಹುಟ್ಟುಹಾಕಿದೆ.

ಅಜಿತ್ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಟಿ ತ್ರಿಷಾ ಅವರಿಗೆ ಸಿಕ್ಕ ಗೌರವ ಮತ್ತು ಸವಲತ್ತುಗಳು ಚರ್ಚೆ ಹುಟ್ಟಲು ಪ್ರಮುಖ ಕಾರಣ. ಒಬ್ಬ ಮುಖ್ಯಮಂತ್ರಿಯ ಪತ್ನಿಗೆ ಸಿಗುವಂತಹ ಭದ್ರತೆ, ಪ್ರೋಟೋಕಾಲ್ ಹಾಗೂ ಸರ್ಕಾರಿ ವಾಹನಗಳ ಬೆಂಗಾವಲು ವ್ಯವಸ್ಥೆಯನ್ನು ತ್ರಿಷಾಗೆ ಕಲ್ಪಿಸಲಾಗಿತ್ತು. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತದೆ ಎಂದು ಜನರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ವೈವಾಹಿಕ ಜೀವನ ಸದ್ಯ ಬಿಕ್ಕಟ್ಟಿನಲ್ಲಿದೆ. ಇವರಿಬ್ಬರ ವಿಚ್ಛೇದನ ಪ್ರಕರಣವು ಪ್ರಸ್ತುತ ನ್ಯಾಯಾಲಯದಲ್ಲಿದೆ. ವಿಚ್ಛೇದನ ಪ್ರಕ್ರಿಯೆ ಮುಗಿದು ಒಂದು ತಾರ್ಕಿಕ ಅಂತ್ಯ ಕಾಣುವವರೆಗೆ ಅಥವಾ ಅಧಿಕೃತವಾಗಿ ಮದುವೆಯಾಗುವವರೆಗೆ ವಿಜಯ್ ಅವರು ತ್ರಿಷಾ ಅವರನ್ನು ತಮ್ಮ ವೈಯಕ್ತಿಕ ವಿಷಯಗಳಿಂದ ದೂರ ಇಡುವುದು ಸೂಕ್ತ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಪಾತ್ರ ಕೊಟ್ಟಿಲ್ಲವೆಂದು ನಿರ್ಮಾಪಕರ ಮೇಲೆ ಮುನಿಸಿಕೊಂಡಿದ್ದ ತ್ರಿಷಾ

ಇವರಿಬ್ಬರು ಹೊರಗೆ ಹೋದಾಗಲೆಲ್ಲಾ ಮಾಧ್ಯಮಗಳು ಇವರ ಮೇಲೆ ಅತಿಯಾದ ಗಮನ ಹರಿಸುವುದರಿಂದ, ಅದು ವಿಜಯ್ ಅವರ ಮಕ್ಕಳ ಮನಸ್ಸಿನ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಒಬ್ಬ ಜವಾಬ್ದಾರಿಯುತ ತಂದೆಯಾಗಿ, ಈ ಕಠಿಣ ಸಮಯದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಾದ ಕರ್ತವ್ಯ ವಿಜಯ್ ಮೇಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *