ಬೆಂಗಳೂರು, (ಜೂನ್ 24): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (krishna byre gowda) ಅವರು ಪ್ರತಿದಿನ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಬೆಂಗಳೂರು ರಸ್ತೆಗಳ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾಯ್ತು. ಇದೀಗ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಜೊತೆಗೆ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು, ಅವೈಜ್ಞಾನಿಕ ಕ್ರಮಗಳ ಮೂಲಕ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೇ ವೇಳೆ ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ.
ಇಂತಹ ಅವೈಜ್ಞಾನಿಕ ಕ್ರಮಗಳ ಮೂಲಕ ಟ್ರಾಫಿಕ್ ಸಮಸ್ಯೆಯನ್ನು ನಾವೇ ಕೃತಕವಾಗಿ ನಿರ್ಮಿಸುತ್ತಿದ್ದೇವೆ
ದಯವಿಟ್ಟು ಮೊದಲು ಸಿಗ್ನಲ್ ಗಳಲ್ಲಿನ ಹಂಪ್ಸ್ ಗಳನ್ನು ತೆಗೆಯಿರಿ, ಗುಂಡಿಮುಚ್ಚಿ, ಸಿಗ್ನಲ್ಗಳ 75 ಮೀಟರ್ ಸುತ್ತಳತೆಯಲ್ಲಿ ಎಲ್ಲೂ ಪಾರ್ಕಿಂಗ್ ಹಾಗೂ ಬೀದಿ ವ್ಯಾಪಾರಕ್ಕೆ ಅವಕಾಶ ನೀಡಬೇಡಿ, ಬಸ್ ನಿಲ್ದಾಣಗಳಿಗೂ ಅವಕಾಶ ನೀಡಬೇಡಿ ಎಂದು ಟ್ರಾಫಿಕ್ ಸಮಸ್ಯೆಯ ನಿವಾರಣೆಗೆ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ಇದನ್ನೂ ನೋಡಿ: ಫುಟ್ ಪಾತ್ ತೆರವಿಗೆ ದಿಟ್ಟ ಹೆಜ್ಜೆ: ತೊಂದ್ರೆ ಬಂದ್ರೆ ನಿಮ್ಮ ಬೆನ್ನಿಗೆ ನಾನಿದ್ದೇನೆ ಎಂದ ಕೃಷ್ಣ ಬೈರೇಗೌಡ
