ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ – Kannada News | CJ Roy Death Case: Bengaluru Police Commissioner Orders SIT Probe

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್ ರವಿ ಕೂಡ ಈ ಎಸ್ಐಟಿ ತಂಡದಲ್ಲಿದ್ದಾರೆ. ಆತ್ಮಹತ್ಯೆಗೆ ಐಟಿ ರೈಡ್ ಒತ್ತಡವೇ ಕಾರಣ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಎಸ್ಐಟಿ ಈ ಕುರಿತು ಸಮಗ್ರ ತನಿಖೆ ನಡೆಸಲಿದೆ. ಅವರ ಮೊಬೈಲ್ ಫೋನ್ ಪರಿಶೀಲಿಸಿ, ಹಣಕಾಸು ವ್ಯವಹಾರಗಳು ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *