ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ ಸತೀಶ್ ಜಾರಕಿಹೊಳಿ ಸೇರಿ 7 ಮಂದಿ ಸಚಿವರ ಪಟಲಾಂ ರಾಜಧಾನಿಗೆ ದೌಡು! – Kannada News | CM Siddaramaiah Delhi Visit: Satish Jarkiholi and 6 Other Karnataka Ministers Rush to Capital for High Command Meeting

ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಲವು ಹಿರಿಯ ಸಚಿವರೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಹಾಗೂ ಸಚಿವರು ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ರಾಜ್ಯ ರಾಜಕೀಯದ ಕುರಿತು ಮಹತ್ವದ ಚರ್ಚೆ ನಡೆಸುವ ನಿರೀಕ್ಷೆಯಿದೆ. ಈ ಭೇಟಿಯು ಸಿಎಂ ಮತ್ತು ಡಿಸಿಎಂ ಮಟ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಐಟಿಬಿಟಿ ಪ್ರಿಯಾಂಕ್ ಖರ್ಗೆ ಅವರಂತಹ ಇತರ ಪ್ರಮುಖ ಸಚಿವರು ಕೂಡ ದೆಹಲಿಗೆ ತೆರಳುತ್ತಿರುವುದು ಕುತೂಹಲ ಹೆಚ್ಚಿಸಿದೆ.

ಸಿದ್ದರಾಮಯ್ಯ ಮಾತ್ರವಲ್ಲದೆ ಸಚಿವರಾದ ಹೆಚ್​ಕೆ ಪಾಟೀಲ್, ಹೆಚ್​ಸಿ ಮಹದೇವಪ್ಪ, ಬೈರತಿ ಸುರೇಶ್, ಕೆಜೆ ಜಾರ್ಜ್ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ ಸಹ ದೆಹಲಿಗೆ ತೆರಳುತ್ತಿದ್ದಾರೆ. ರಾಜ್ಯದ ಆರು ತಿಂಗಳಿನಿಂದ ನಡೆಯುತ್ತಿರುವ ಕೆಲ ವಿಷಯಗಳು ಈ ಸಭೆಯ ಪ್ರಮುಖ ಅಜೆಂಡಾ ಆಗುವ ಸಾಧ್ಯತೆಯಿದೆ. ರಾಜ್ಯಸಭೆ ಚುನಾವಣೆ ಹಾಗೂ ಎಂಎಲ್ಸಿಗಳ ಕುರಿತು ಚರ್ಚಿಸಲು ಹೈಕಮಾಂಡ್ ಈ ನಾಯಕರನ್ನು ದೆಹಲಿಗೆ ಕರೆದಿದೆ ಎಂದು ಹೇಳಲಾಗಿದೆ. ಆದರೆ, ಒಟ್ಟಾರೆಯಾಗಿ ಪ್ರಮುಖ ನಾಯಕರ ದೆಹಲಿ ಭೇಟಿ ವೇಳೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *